Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಸನ ಆಯ್ತು.. ಬಳ್ಳಾರಿ ಆಯ್ತು.. ಈಗ ಶಿವಮೊಗ್ಗದಲ್ಲಿ ಸಹೋದರರ ಸವಾಲಿಗೆ ಸಜ್ಜು..!

Facebook
Twitter
Telegram
WhatsApp

ಶಿವಮೊಗ್ಗ: 2023ರ ಚುನಾವಣಾ ಕಣ ಸಿದ್ಧವಾಗಿದೆ. ಈ ಬಾರಿ ಚುನಾವಣೆಯ ಬಿಸಿ ಜೋರಾಗಿಯೇ ಸುಡಲಿದೆ. ಯಾಕಂದ್ರೆ ಕುಟುಂಬದಲ್ಲಿ ರಾಜಕೀಯ ಬಿಸಿ ಇದೆ. ಭಿನ್ನಾಭಿಪ್ರಾಯವಿದೆ. ಹಾಸನ ಕ್ಷೇತ್ರದ ಟಿಕೆಟ್ ಗಾಗಿ ಭವಾನಿ ರೇವಣ್ಣ ಮತ್ತು ಕುಟುಂಬಸ್ಥರ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಇನ್ನು ಬಳ್ಳಾರಿಯಲ್ಲಿ ಅಣ್ಣ-ತಮ್ಮಂದಿರ ನಡುವೆಯೇ ನೇರ ಫೈಟ್ ಆರಂಭವಾಗು ಲಕ್ಷಣಗಳಿವೆ. ಇದರ ನಡುವೆ ಈಗ ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಹಾಗೂ ಕುಮಾರ ಬಂಗಾರಪ್ಪ ನಡುವಿನ ಯುದ್ಧ ಮತ್ತೆ ಶುರುವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಈ ಬಾರಿ ಮಧು ಬಂಗಾರಪ್ಪ ಅವರನ್ನು ಎರಡನೇ ಬಾರಿಗೆ ಸೋಲಿಸಬೇಕೆಂದು ಕುಮಾರ ಬಂಗಾರಪ್ಪ ಪಣ ತೊಟ್ಟಿದ್ದಾರೆ. ಅದಕ್ಕೆ ಈಗಾಗಲೇ ಸಾಕಷ್ಟು ತಯಾರಿ ಕೂಡ ನಡೆದಿದೆ. ಶಿವಮೊಗ್ಗದ ಅಂಗಳದಲ್ಲಿ ಈಗ ಕುಮಾರ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ನಡುವಿನ ಫೈಟ್ ಜೋರಾಗಿಯೇ ಇರಲಿದೆ.

ಚುನಾವಣಾ ಅಬ್ಬರದ ಪ್ರಚಾರ ಒಂದು ಕಡೆಯಾದರೆ, ಎಲ್ಲಾ ಪಕ್ಷಗಳಲ್ಲೂ ಟಿಕೆಟ್ ಆಕಾಂಕ್ಷಿಗಳು ಬೆಳೆಯುತ್ತಿದ್ದಾರೆ. ಭಿನ್ನಾಭಿಪ್ರಾಯ ಶಮನ ಮಾಡಿ, ಪಕ್ಷದಲ್ಲಿ ಇರಿಸಿಕೊಳ್ಳುವುದು ಪಕ್ಷದವರಿಗೆ ದೊಡ್ಡ ಸವಾಲಿನ ಕೆಲಸವೇ ಸರಿ. ಅದರ ಜೊತೆಗೆ ಸಂಬಂಧಗಳು ಕೂಡ ಚುನಾವಣೆಯಲ್ಲಿ ಸ್ಪರ್ಧೆಯೊಡ್ಡುತ್ತಿರೋದು ರೋಚಕ ಪಂದ್ಯ ನೋಡಿದಂತ ಅನುಭವವನ್ನೇ ನೀಡುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!