ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ ಫೆ. 04 : ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣದಲ್ಲಿನ ಆರೋಪದ ಮೇಲೆ ತಂದೆ, ತಾಯಿ ಇಬ್ಬರೂ ಜೈಲು ಪಾಲದ ಹಿನ್ನೆಲೆಯಲ್ಲಿ ಅವರ ಮೂವರು ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿ, ಬಳಿಕ ಮಕ್ಕಳ ಪಾಲನೆ, ಪೋಷಣೆ ಹಿತದೃಷ್ಟಿಯಿಂದ ಮೂವರು ಮಕ್ಕಳನ್ನೂ ಬಾಲಮಂದಿರಕ್ಕೆ ದಾಖಲು ಮಾಡಲಾಗಿದೆ ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ. ಪ್ರಭಾಕರ್ ಆರ್ ಅವರು ತಿಳಿಸಿದ್ದಾರೆ.
ವ್ಯಕ್ತಿಯೊಬ್ಬರ ಕೊಲೆ ಪ್ರಕರಣದಲ್ಲಿ ತಂದೆ ಚಿತ್ರದುರ್ಗ ಬಂದಿಖಾನೆ ಹಾಗೂ ತಾಯಿ ಶಿವಮೊಗ್ಗದ ಮಹಿಳಾ ಕೇಂದ್ರ ಕಾರಾಗೃಹದ ಪಾಲಾಗಿದ್ದಾರೆ.
ಇವರಿಗೆ 8ನೇ ತರಗತಿ ಓದುತ್ತಿರುವ 16 ವರ್ಷದ ಪುತ್ರ, 7ನೇ ತರಗತಿಯ 15 ವರ್ಷದ ಪುತ್ರ ಹಾಗೂ 03 ನೇ ತರಗತಿಯ 11 ವರ್ಷದ ಪುತ್ರಿ ಇದ್ದು, ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಮಕ್ಕಳ ಪೋಷಕರು ಬಂಧಿಖಾನೆಯಲ್ಲಿ ಇರುವುದರಿಂದ ಮಕ್ಕಳ ಪಾಲನೆ ಪೋಷಣೆಗೆ ಯಾರೂ ಇಲ್ಲದ ಕಾರಣ, ಚಿತ್ರಹಳ್ಳಿ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರಾದ ಆಶಾ ಇವರು ಮಕ್ಕಳ ಕಲ್ಯಾಣ ಸಮಿತಿಗೆ ಮಾಹಿತಿ ನೀಡಿದ್ದು, ಹೊಳಲ್ಕೆರೆ ಸಿಡಿಪಿಒ ಮಲ್ಲೇಶ್ ಅವರು ಈ ಮೂವರು ಮಕ್ಕಳನ್ನು ಚಿತ್ರದುರ್ಗ ಮಕ್ಕಳ ಕಲ್ಯಾಣ ಸಮಿತಿಗೆ ಕಳೆದ ಜ. 31 ರಂದು ಹಾಜರುಪಡಿಸಿದ್ದರು. ಇದೀಗ ಮಕ್ಕಳ ಪಾಲನೆ, ಪೋಷಣೆ ಹಿತದೃಷ್ಟಿಯಿಂದ ಮೂವರು ಮಕ್ಕಳನ್ನು ಬಾಲಕರ ಮತ್ತು ಬಾಲಕಿಯರ ಸರ್ಕಾರಿ ಬಾಲಮಂದಿರ ಸಂಸ್ಥೆಗಳಿಗೆ ದಾಖಲು ಮಾಡಿಕೊಳ್ಳಲಾಗಿದೆ ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ. ಪ್ರಭಾಕರ್ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್