Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇನ್ನೇನು ದ್ರಾಕ್ಷಿ ಮಾರುಕಟ್ಟೆಗೆ ಸಾಗಿಸಬೇಕೆನ್ನುವಾಗಲೇ ಬೆಳೆ ನಾಶ : ಮನನೊಂದು ರೈತ ಆತ್ಮಹತ್ಯೆ..!

Facebook
Twitter
Telegram
WhatsApp

ವಿಜಯಪುರ: ಭೂಮಿಯನ್ನೇ ನಂಬಿ ಬದುಕುವ ರೈತರಿಗೆ ಬೆಳೆ ಕೈಕೊಟ್ಟಾಗ, ಚಿಂತೆಯೊಂದೆ ಅವರ ದಾರಿಯಾಗಿ ಬಿಡುತ್ತದೆ. ಹಗಲು ರಾತ್ರಿಯೆನ್ನದೆ ಬೆಳೆಗಾಗಿ ಸಮಯ ಕೊಟ್ಟು, ಶ್ರಮವಹಿಸಿ ಬೆಳೆದ ಬೆಳೆ ಕೈಸೇರದೆ ಹೋದಾಗ ಆ ನೋವಲ್ಲೇ ಅದೆಷ್ಟೋ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೋಗ ವಿಜಯಪುರದಲ್ಲೂ ಅಂಥದ್ದೇ ಘಟನೆ ನಡೆದಿದೆ.

ಮನೋಹರ್ ಆಯತವಾಡ ಎಂಬ ರೈತ ಕಷ್ಟಪಟ್ಟು, ಸಾಲ ಸೋಲ ಮಾಡಿ ದ್ರಾಕ್ಷಿ ಬೆಳೆಯನ್ನು ಬೆಳೆದಿದ್ದ. 55 ವರ್ಷ ವಯಸ್ಸಲ್ಲೂ ಆ ಬೆಳೆಗಾಗಿ ಶ್ರಮವಹಿಸಿದ್ದರು. ಬೆಳೆಯೂ ತುಂಬಾ ಚೆನ್ನಾಗಿ ಬಂದಿತ್ತು. ಬೆಳೆ ನೋಡಿ ಖುಷಿ ಪಟ್ಟಿದ್ದರು. ಸಾಲ ಎಲ್ಲಾ ತೀರುತ್ತೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದರು. ಮಾರುಕಟ್ಟೆಗೆ ದ್ರಾಕ್ಷಿಯನ್ನು ಸಾಗಿಸಿದರೆ ಒಳ್ಳೆ ಲಾಭ ಬರುತ್ತೆ ಎಂದು ಭರವಸೆ ಇಟ್ಟುಕೊಂಡಿದ್ದ ರೈತ ಇಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮನೋಹರ್ ಆಯತವಾಡ, ಸಂಪಾಗಿ ಬೆಳೆದ ದ್ರಾಕ್ಷಿ ಬೆಳೆಗೆ ಅವೈಜ್ಞಾನಿಕವಾಗಿ ಗೊಬ್ಬರ ಹಾಕಿದ್ದಾರೆ. ಇದರಿಂದ ನೋಡ ನೋಡುತ್ತಲೇ ದ್ರಾಕ್ಷಿ ಬೆಳೆ ಒಣಗಿ ಹೋಗಿದೆ. ಇದರಿಂದ ರೈತ ಮನೋಹರ್ ಕಂಗಲಾಗಿದ್ದಾರೆ. ಯಾಕಂದ್ರೆ ದ್ರಾಕ್ಷಿ ಬೆಳೆಗೆ ಅಂತ ಐದು ಲಕ್ಷ ಸಾಲ ಮಾಡಿಕೊಂಡಿದ್ದರಂತೆ. ದ್ರಾಕ್ಷಿ ಬೆಳೆಯೂ ಇಲ್ಲ, ಸಾಲ ತೀರಿಸುವ ಮಾರ್ಗವೂ ಕಾಣದೆ ತೋಟದ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!