Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಟರ್ಕಿಯಲ್ಲಿ ಪ್ರಬಲ ಭೂಕಂಪ.. ಅಪಾರ ಪ್ರಾಣಹಾನಿ.. ಸುನಾಮಿ ಭೀತಿ…!

---Advertisement---

ಸೋಮವಾರ ಮುಂಜಾನೆ ಟರ್ಕಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಸಿರಿಯಾದ ಗಡಿಯಲ್ಲಿರುವ ದಕ್ಷಿಣ ಟರ್ಕಿಯಲ್ಲಿ ಸಂಭವಿಸಿದ ಭೂಕಂಪನವು ರಿಕ್ಟರ್ ಮಾಪಕದಲ್ಲಿ 7.8 ರಷ್ಟು ದಾಖಲಾಗಿದೆ.  ಇದಾದ ಬಳಿಕ 6.7ರಷ್ಟು ತೀವ್ರತೆಯೊಂದಿಗೆ ಭೂಮಿ ಮತ್ತೆ ಕಂಪಿಸಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಗಜಿಯಾಂಟೆಪ್ ಪ್ರಾಂತ್ಯದ ನೂರ್ಡಗಿ ನಗರದ ಪೂರ್ವಕ್ಕೆ 26 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. 17.9 ಕಿ.ಮೀ. ಭೂಕಂಪದ ಕೇಂದ್ರಬಿಂದುವಿದೆ ಎಂದು ಹೇಳಲಾಗಿದೆ.  ಅಲ್ಲದೆ, ಕೆಲವೇ ನಿಮಿಷಗಳಲ್ಲಿ, ಮಧ್ಯ ಟರ್ಕಿಯಲ್ಲಿ 9.9 ಕಿಲೋಮೀಟರ್ ಆಳದಲ್ಲಿ ಎರಡನೇ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.

https://twitter.com/sentdefender/status/1622412859429867522?t=raXM4sCas8Gf4VJAeeyeVA&s=19

ಭೂಕಂಪದಿಂದಾಗಿ ಹಲವು ಕಟ್ಟಡಗಳು ಕುಸಿದಿವೆ. ಆದರೆ, ಪ್ರಾಣ ಅಥವಾ ಆಸ್ತಿ ನಷ್ಟದ ಬಗ್ಗೆ ಅಧಿಕೃತ ಹೇಳಿಕೆ ಬಂದಿಲ್ಲ.
ಆದರೆ, ಭಾರೀ ಪ್ರಾಣಹಾನಿ ಸಂಭವಿಸಿದೆ.
ಭೂಕಂಪದ ನಂತರ ಕಟ್ಟಡಗಳ ಅವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ವಿಡಿಯೋಗಳಲ್ಲಿ ಗಾಯಾಳುಗಳು ಭಯದಿಂದ ಕಿರುಚಿಕೊಂಡು ಓಡುತ್ತಿರುವ ದೃಶ್ಯ ಕಂಡು ಬಂದಿದೆ.

ಇದುವರೆಗೆ ಕನಿಷ್ಠ 53 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದ್ದು, ಅವಶೇಷಗಳಡಿ ಹಲವರು ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಹೊರತೆಗೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಲ್ಲದೆ, ಹೆಚ್ಚಿನ ಸಂಖ್ಯೆಯ ಕಟ್ಟಡಗಳು ಮತ್ತು ಮನೆಗಳು ಸಹ ಕುಸಿದಿವೆ. ಭೂಕಂಪನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಬರಬೇಕಿದೆ.

ಏತನ್ಮಧ್ಯೆ, ಭೂಕಂಪನದ ಕೇಂದ್ರಬಿಂದುವು ದಕ್ಷಿಣ ಟರ್ಕಿಶ್ ನಗರವಾದ ಕಖ್ರಮನ್ಮರಸ್ ಬಳಿ 10 ಕಿಲೋಮೀಟರ್ ಆಳದಲ್ಲಿ ಪತ್ತೆಯಾಗಿದೆ ಎಂದು ಜರ್ಮನ್ ರಿಸರ್ಚ್ ಫಾರ್ ಜಿಯೋಸೈನ್ಸ್ ಹೇಳಿದೆ. ಸುನಾಮಿ ಅಪಾಯದ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಅದು ಹೇಳಿದೆ. ಗಾಜಿಯಾಂಟೆಪ್ ಜೊತೆಗೆ, ಸುತ್ತಮುತ್ತಲಿನ ಪ್ರಾಂತ್ಯಗಳಾದ ಅನ್ ಮಾಲ್ಟ್ಯಾ ಮತ್ತು ದಿಯಾರ್‌ಬಕಿರ್‌ಗಳಲ್ಲಿನ ಕಟ್ಟಡಗಳು ಸಹ ನಾಶವಾದವು. ಅಲ್ಲದೆ, ಗಡಿಯಲ್ಲಿ ಲೆಬನಾನ್ ಮತ್ತು ಸಿರಿಯಾದಲ್ಲಿ ಭೂಕಂಪದಿಂದಾಗಿ ಅನೇಕ ಜನರು ಸಾವನ್ನಪ್ಪಿದ್ದಾರೆ.
ಸಿರಿಯಾದಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...