Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

UPA ಅವಧಿಯಲ್ಲಿ ಜಾರಿಯಾಗಿದ್ದ HAL, ಈಗ ಮೋದಿ ಪ್ರಚಾರಗಿಟ್ಟಿಸಿಕೊಳ್ಳುತ್ತಿದ್ದಾರೆ : ಸಿದ್ದರಾಮಯ್ಯ

Facebook
Twitter
Telegram
WhatsApp

ಕಲಬುರಗಿ: ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬಂದಿದ್ದು, ಹಲವು ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ. ಅದರ ಜೊತೆಗೆ ಗುಬ್ಬಿಯಲ್ಲಿ ನಿರ್ಮಾಣಗೊಂಡಿರುವ HAL ಘಟಕವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇದೀಗ ವ್ಯಂಗ್ಯವಾಡಿದ್ದಾರೆ. ಯುಪಿಎ ಅವಧಿಯಲ್ಲಿ ಜಾರಿಯಾಗಿದ್ದ ಯೋಜನೆಗಳಿಗೆ ಮೋದಿ ಅವರು ಈಗ ಚಾಲನೆ ನೀಡುವ ಮೂಲಕ, ಪ್ರಚಾರ ಪಡೆಯುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ನಗರದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮೋದಿ ಯಾವಾಗಲೂ ಹಾಗೆ. ನಾವೂ ಮಾಡಿದ ಕೆಲಸವನ್ನೇ ಉದ್ಘಾಟನೆ ಮಾಡುತ್ತಾರೆ. ನಾವೂ ಮಾಡಿದ ಅಡುಗೆಯನ್ನೇ ಮೋದಿ ಬಡಿಸುತ್ತಿದ್ದಾರೆ. ಲಂಬಾಣಿ ಜನರಿಗೆ ಕಂದಾಯ ಗ್ರಾಮ ಮಾಡಿರುವುದು ನಾವು, ಕಾನೂನು ಮಾಡಿರುವುದು ನಾವೂ, ಈಗ ಹಕ್ಕು ಪತ್ರ ಕೊಡಲು ಮೋದಿಯವರನ್ನು ಕರೆದುಕೊಂಡು ಬಂದಿದ್ದರು. ನಾವೂ ಅಡುಗೆ ಮಾಡುತ್ತೀವಿ, ಅವರು ಬಂದು ಬಡಿಸ್ತಾರೆ ಎಂದಿದ್ದಾರೆ.

ರಾಜ್ಯ ಬಿಜೆಪಿಗೆ ಮೋದಿಯೇ ಬಂಡವಾಳ. ಯಾಕಂದ್ರೆ ಏನು ಕೆಲಸ ಮಾಡಿಲ್ಲವಲ್ಲ. ಇದು ಜನ ವಿರೋಧಿ ಸರ್ಕಾರ. 40% ಸರ್ಕಾರ. ಪ್ರಧಾನಿ ಬಂದರೆ ವೋಟ್ ಬರುತ್ತೆ ಎಂದುಕೊಂಡಿದ್ದಾರೆ ಬಿಜೆಪಿ ನಾಯಕರು. ಆದ್ರೆ ಜನ ಈಗಾಗಲೇ ನಿರ್ಧಾರ ಮಾಡಿದ್ದಾರೆ. ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

error: Content is protected !!