Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅನುದಾನ ದುರ್ಬಳಕೆ ಹಾಗೂ ಕರ್ತವ್ಯ ಲೋಪ : ಹಾಸ್ಟೆಲ್ ವಾರ್ಡನ್ ಅಮಾನತು ಮಾಡಿ ಆದೇಶಿಸಿದ ಸಿಇಓ ಎಂ.ಎಸ್. ದಿವಾಕರ್

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಫೆ.06) : ಮೂರು ಲಕ್ಷಕ್ಕಿಂತ ಹೆಚ್ಚಿನ ಹಣವನ್ನು ದುರುಪಯೋಗಪಡಿಸಿಕೊಂಡ ಆಧಾರದ ಮೇಲೆ ಹಾಸ್ಟೆಲ್ ವಾರ್ಡನ್ ಕೇಶವಮೂರ್ತಿಯನ್ನು ಅಮಾನತು ಮಾಡಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್ ಆದೇಶಿಸಿದ್ದಾರೆ.

ಮೊಳಕಾಲ್ಮೂರು ತಾಲೂಕಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯ ನರೇಗಾ ದಿವಸ್ ಕಾರ್ಯಕ್ರಮಕ್ಕೆ ಇದೇ ಫೆಬ್ರವರಿ 2 ರಂದು ಅನಿರೀಕ್ಷಿತವಾಗಿ ಮೊಳಕಾಲ್ಮೂರು ಪಟ್ಟಣದ ಪರಿಶಿಷ್ಟ ಪಂಗಡದ ಹಾಸ್ಟೆಲಿಗೆ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ದಾಸ್ತಾನು ಮತ್ತು ವಿತರಣೆ ದಾಖಲಾತಿಗಳನ್ನ ಪರಿಶೀಲಿಸಿದಾಗ, ಹಾಸ್ಟೆಲಿನ ವಾರ್ಡನ್ ಕೇಶವಮೂರ್ತಿ ರವರು ದಾಸ್ತಾನಿನಲ್ಲಿ 21ಕ್ವಿಂಟಲ್ ಅಕ್ಕಿಯಿದೆ ಎಂದು ನಮೂದಿಸಿದ್ದು, ದಾಸ್ತಾನು ಕೊಠಡಿಯಲ್ಲಿ ಪರಿಶೀಲಿಸಿದಾಗ ಒಂದು ಕ್ವಿಂಟಲ್ ಮಾತ್ರ ಅಕ್ಕಿ ಕಂಡುಬರುತ್ತದೆ.

ವಿಚಾರಿಸಿದಾಗ ಹಾಜರಿದ್ದ ಸಮಾಜ ಕಲ್ಯಾಣ  ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮೊಳಕಾಲ್ಮೂರು ರವರು ನೆನ್ನೆ ದಾಸ್ತಾನಿನಲ್ಲಿ ಅಕ್ಕಿ ಇತ್ತು ಹಾಗಾಗಿ ಸಹಿ ಮಾಡಿರುತ್ತೇನೆ ಆದರೆ ಇಂದು ಅಕ್ಕಿ ಇಲ್ಲ ಎಂದು ತಿಳಿಸಿದರು.

ಈ ಹಿಂದೆ ST ಹಾಸ್ಟೆಲ್ ವಾರ್ಡನ್ ಆಗಿದ್ದ ಇದೇ ಕೇಶವಮೂರ್ತಿ ಪಟ್ಟಣದ ಕನಕ ಪತ್ತಿನ ಸಹಕಾರ ಸಂಘಕ್ಕೆ 3 ಲಕ್ಷ ಕಿಂತ ಮೇಲ್ಪಟ್ಟು ಹಣವನ್ನು ಜಮಾ ಮಾಡಿ, ಸಂಬಂಧಿಸಿದ ಸರಬರಾಜುದಾರರಿಗೆ ದಾಸ್ತಾನು ಹಣ ಜಮಾ ಮಾಡದೆ, ತಾನೇ ಸ್ವತಃ ಬಿಡಿಸಿಕೊಂಡಿರುವ ಬಗ್ಗೆ ದಾಖಲಾತಿಗಳು ಲಭ್ಯವಾಗಿರುತ್ತವೆ.
ಒಟ್ಟಾರೆ ಪರಿಶೀಲಿಸಿದಾಗ 20 ಕ್ವಿಂಟಲ್ ಅಕ್ಕಿ  ಮತ್ತು ಹಣ ದುರುಪಯೋಗವಾಗಿರುವ ಬಗ್ಗೆ ಮೇಲ್ನೋಟಕ್ಕೆ ಕಂಡು ಬಂದಿದೆ.

ಕೇಶವಮೂರ್ತಿ,ವಾರ್ಡನ್, ಪರಿಶಿಷ್ಟ ಪಂಗಡ ಬಾಲಕರ ವಸತಿ ನಿಲಯ ಮೊಳಕಾಲ್ಮೂರು ಪಟ್ಟಣ, ರವರು ಸರ್ಕಾರದ ಅನುದಾನ ದುರ್ಬಳಕೆ ಹಾಗೂ ಕರ್ತವ್ಯ ಲೋಪ ಎಸಗಿರುವುದು ಕಂಡುಬಂದಿದ್ದು, ಇವರನ್ನು ತಕ್ಷಣದಿಂದಲೇ ಅಮಾನತು ಮಾಡಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್ ಆದೇಶಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!