Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವರಾಹ ರೂಪಂ ಸಾಂಗ್ ವಿವಾದ : ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರಿಗೆ ನಿರೀಕ್ಷಣಾ ಜಾಮೀನು..!

---Advertisement---

ಕಾಂತಾರ ಸಿನಿಮಾವನ್ನು ಇಡೀ ದೇಶವೇ ಕೊಂಡಾಡುವಂತೆ ಆಗಿದೆ. ಅದರಲ್ಲೂ 100 ದಿನಗಳ ಕಾಲ ಥಿಯೇಟರ್ನಲ್ಲಿ ಯಶಸ್ವಿ ಪ್ರದರ್ಶನ ಕಂಡಿದೆ. ಆ ಖುಷಿಯನ್ನು ಇತ್ತಿಚೆಗೆ ಇಡೀ ಚಿತ್ರತಂಡ ಸೆಲೆಬ್ರೇಷನ್ ಮಾಡಿಕೊಂಡಿದೆ. ಕಾಂತಾರ ಸಿನಿಮಾದಲ್ಲಿ ವರಾಹ ರೂಪಂ ಹಾಡು ವಿವಾದಕ್ಕೆ ಸಿಲುಕಿದ್ದು ಗೊತ್ತೆ ಇದೆ. ಎರಡೆರಡು ಕಡೆ ಈ ಗ ಹಾಡಿನ ಸಂಬಂಧ ಕೇಸ್ ದಾಖಲಾಗಿತ್ತು. ಬಳಿಕ ಒಂದು ಕಡೆ ಕಾಂತಾರ ಸಿನಿಮಾ ತಂಡಕ್ಕೆ ಯಶಸ್ಸು ಸಿಕ್ಕಿತ್ತು. ಇದೀಗ ಕೇರಳ ಹೈಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದ್ದು, ಈ ಸಂಬಂಧ ವಿಜಯ್ ಕಿರಗಂದೂರು ಹಾಗೂ ರಿಷಬ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.

5 ವರ್ಷಗಳ ಹಿಂದೆ ರಿಲೀಸ್ ಆದ ನವರಸಂ ಎಂಬ ಇನ್ನೊಂದು ಹಾಡಿನ ಕಾಪಿ ವರಾಹ ರೂಪಂ ಹಾಡು ಎಂಬ ಆರೋಪದ ಜೊತೆಗೆ ದೂರು ದಾಖಲಿಸಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿರುವ ಕೇರಳ ಹೈಕೋರ್ಟ್, ಕಾಪಿರೈಟ್ಸ್ ಪ್ರಕರಣದಲ್ಲಿ ಕೋರ್ಟ್ ನಿಂದ ಮಧ್ಯಂತರ ಹಾಗೂ ಅಂತಿಮ ಆದೇಶ ಬರುವ ತನಕ ವರಾಹ ರೂಪಂ ಹಾಡನ್ನು ಬಳಸುವಂತಿಲ್ಲ. ಈ ಪ್ರಕರಣದಲ್ಲಿ ಮರುವಿಚಾರಣೆ ಕೋರಲು ಅರ್ಜಿದಾರರಿಗೆ ಅವಕಾಶವಿದೆ. ತೈಕುಡಂ ಸಂಸ್ಥೆ ತ್ವರಿತ ನಿರ್ಧಾರ ಪಡೆಯುವುದಕ್ಕೆ ಸೂಕ್ತ ಸಿವಿಲ್ ನ್ಯಾಯಾಲಯಕ್ಕೆ ಹೋಗಬಹುದು ಎಂದಿದೆ.

ಇನ್ನು ಕಾಂತಾರ ಸಿನಿಮಾ ತಂಡದ ವಕೀಲರು ವಾದ ಮಾಡಿದ್ದು, ವರಾಹಂ ಹಾಡು ಸ್ವತಂತ್ರವಾಗಿ ಸೃಷ್ಟಿಯಾಗಿದೆ. ನವರಸಂ ಹಾಡಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಆ ಹಾಡಿಗೆ ಹೋಲುತ್ತದೆ ಎಂದು ಯಾವುದೇ ಸಾಕ್ಷಿಗಳನ್ನು ಕಲೆ ಹಾಕಿಲ್ಲ. ಬದಲಾಗಿ ಸಿನಿಮಾ ನೋಡಿದಾಗ ಸಾಮ್ಯತೆಯನ್ನಷ್ಟೇ ಗುರತಿಸಿದ್ದಾರೆ ಎಂದು ವಾದ ಮಂಡಿಸಿ, ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...