Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆ ಬಂತು ಮಳೆ..ನಿಲ್ಲದ ಹಸ್ತ ಮಳೆ

Facebook
Twitter
Telegram
WhatsApp

ಚಿತ್ರದುರ್ಗ : ಜಿಲ್ಲಾದ್ಯಂತ ಬುಧವಾರ ಸುರಿದ  ಹಸ್ತ ಮಳೆಗೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ.

ಮುಂಗಾರಿನ ಕೊನೆ ದಿವಸಗಳಲ್ಲಿ ಮಳೆ ಆರಂಭವಾಗಿ ಈರುಳ್ಳಿ, ಶೇಂಗಾ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿಸಿದೆ. ಬೆಳಗ್ಗೆಯಿಂದಲೇ ಆರಂಭವಾದ ಮಳೆ ರಾತ್ರಿವರೆಗೂ ಮುಂದುವರೆಯಿತು. ದಿನವಿಡೀ ಕೆಲ ನಿಮಿಷಗಳ ವಿರಾಮ ನೀಡಿ ನಿರಂತರವಾಗಿ ಸುರಿದ ಕಾರಣ ಜನರು ಮನೆ ಬಿಟ್ಟು ಹೊರ ಬರಲಿಲ್ಲ.

ಮಳೆಯ ಆರ್ಭಟ ಜೋರಾಗಿದ್ದ ಕಾರಣ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಸಮಸ್ಯೆ ಅನುಭವಿಸಿದರು. ನಗರದ ಜೆಸಿಆರ್, ಗುಮಾಸ್ತ ಕಾಲನಿ, ಹೊಳಲ್ಕೆರೆ ರಸ್ತೆ ಸೇರಿದಂತೆ ವಿವಿಧೆಡೆಯ ಮನೆಗಳಿಗೆ ನೀರು ನುಗ್ಗಿತು.

ರಸ್ತೆ ಕಾಮಗಾರಿ ನಡೆಯುತ್ತಿರುವ ಕಾರಣ ವಾಹನ ಸವಾರರು ಮಳೆ ನಡುವೆ ಪರದಾಡಿದರು. ಆಟೋಗಳಿಗೆ ಎಂದಿಗಿಂತ ಡಿಮ್ಯಾಂಡ್ ಹೆಚ್ಚಾಗಿತ್ತು. ಮಳೆಯ ರಭಸಕ್ಕೆ ಎಲ್‌ಐಸಿ ಹೊಂಡ ತುಂಬಿ ಹರಿದಿದ್ದು, ಮುಖ್ಯ ರಸ್ತೆ ಜಲಾವೃತಗೊಂಡಿದೆ.

ತಾಲೂಕಿನ ಸುತ್ತಮುತ್ತಲಿನ ಭಾಗದಲ್ಲಿ ಸಹ ಉತ್ತಮ ಮಳೆಯಾಗಿದೆ. ಕಡ್ಲೆ ಬಿತ್ತನೆಗೆ ಭೂಮಿ ಹದ ಮಾಡಿಕೊಳ್ಳಲು ಹಾಗೂ ತೋಟಗಾರಿಕೆ ಬೆಳೆಗಳಿಗೆ ಈ ಮಳೆ ಸಹಕಾರಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ನಿಖಿಲ್ ಫಸ್ಟ್ ರಿಯಾಕ್ಷನ್ : ಅಜ್ಜ, ಅಜ್ಜಿ ಬಗ್ಗೆ ಮನವಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಸುದ್ದಿ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶದಾದ್ಯಂತೆ ಸದ್ದು ಮಾಡುತ್ತಿದೆ. ನಟಿ ಮಣಿಯರು ಕೂಡ ಇದಕ್ಕೆ ಆಕ್ರೋಶಿತರಾಗಿ ಮಾತನಾಡುತ್ತಿದ್ದಾರೆ. ಇದೀಗ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮೊ

error: Content is protected !!