ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಹಳೆ ಮೈಸೂರು ಭಾಗವೇ ಟಾರ್ಗೆಟ್. ಜೆಡಿಎಸ್ ಭದ್ರಕೋಟೆಯನ್ನು ಹೊಡೆದು ತಮ್ಮ ಅಡ್ಡ ಮಾಡಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಹೊಂಚು ಹಾಕಿದೆ. ಆದ್ರೆ ಅಷ್ಟು ಸುಲಭವಲ್ಲ ಅಂತ ಕೂಡ ಗೊತ್ತಿದೆ. ಅದಕ್ಕಾಗಿ ಕಾಂಗ್ರೆಸ್ ರಮ್ಯಾ ಅವರನ್ನು ನಿಲ್ಲಿಸುವ ಯೋಜನೆಯಲ್ಲಿದೆ.
ಹಳೆ ಮೈಸೂರಿನ ಭಾಗದಲ್ಲಿ ಜೆಡಿಎಸ್ ಮಣಿಸಲು ಸಿದ್ದರಾಮಯ್ಯ ಹೊಸ ಫಾರ್ಮುಲಾ ಸಿದ್ಧ ಮಾಡಿದ್ದಾರೆ. ಅದನ್ನು ಈಗಾಗಲೇ ಹೈಕಮಾಂಡ್ ಮುಂದೆ ಇಟ್ಟಿದ್ದು, ರಾಮನಗರದಿಂದ ಡಿಕೆ ಸುರೇಶ್ ಅವರನ್ನು ಕಣಕ್ಕಿಳಿಸಿದರೆ, ಚನ್ನಪಟ್ಟಣದಿಂದ ನಟಿ, ಮಾಜಿ ಸಂಸದೆ ರಮ್ಯಾ ಅವರನ್ನು ಕಣಕ್ಕಿಳಿಸುವ ಯೋಜನೆ ಅದಾಗಿದೆ.
ಚನ್ನಪಟ್ಟಣದಿಂದ ರಮ್ಯಾ ಅವರನ್ನು ಕಣಕ್ಕೆ ಇಳಿಸಿದರೆ ಮಂಡ್ಯ ಭಾಗದಲ್ಲೂ ಪ್ರಭಾವ ಬೀರುತ್ತೆ ಎಂಬುದು ಸಿದ್ದರಾಮಯ್ಯ ಅವರ ಅಭಿಪ್ರಾಯವಾಗಿದೆ. ಆದ್ರೆ ರಮ್ಯಾ ಅವರು ಸಂಸದೆಯಾಗಿದ್ದಾಗ ಮಂಡ್ಯ ಕಡೆ ಹೆಚ್ಚಾಗಿ ತಿರುಗಿಯೂ ನೋಡುತ್ತಿರಲಿಲ್ಲ ಎಂಬ ಮಾತುಗಳು ಇರುವುದರಿಂದ ಜೆಡಿಎಸ್ ವೋಟುಗಳನ್ನು ಹೊಡೆಯುವುದು ಕಷ್ಟಸಾಧ್ಯ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್