ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿಯೂ ಹೆಚ್ಚು ಸುದ್ದಿಯಲ್ಲಿದ್ದರು. ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ನಿಲ್ಲುತ್ತಾರೋ ಆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಟ್ರಾಂಗ್ ಕ್ಯಾಂಡಿಡೇಟ್ ಹಾಕುವ ಯೋಜನೆಯಲ್ಲಿದ್ದರು. ಆದ್ರೆ ಬಿಜೆಪಿಗೆ ಸೆಡ್ಡು ಹೊಡೆದಂತೆ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಅನೌನ್ಸ್ ಮಾಡಿದರೂ. ಇದೀಗ ಆ ಕ್ಷೇತ್ರ ಬದಲಾವಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.
ಕೋಲಾರದಲ್ಲಿ ಸಿದ್ದರಾಮಯ್ಯ ಅಂದುಕೊಂಡಷ್ಟು ಗೆಲುವು ಸುಲಭವಲ್ಲ ಎಂಬ ಮಾತುಗಳು ಅದಾಗಲೇ ಕೇಳಿ ಬಂದಿದೆ. ಹೀಗಾಗಿ ಕೋಲಾರದ ಒಳಾಂಗಣ ಪರಿಸ್ಥಿತಿ ಏನು ಎಂಬುದನ್ನು ತಿಳಿಯುವುದಕ್ಕೆ ಅಹಿಂದ ಟೀಂ ಹೋಂ ವರ್ಕ್ ಮಾಡಿತ್ತು. ಇದೀಗ ಆ ವರದಿ ಸಿದ್ದರಾಮಯ್ಯ ಅವರ ಕೈಸೇರಿದೆ.
ಸದ್ಯ ಸಿದ್ದರಾಮಯ್ಯ ಪ್ರಜಾಧ್ವನಿ ಯಾತ್ರೆಯ ಮೂಲಕ ಜನರನ್ನು ತಲುಪುವ ಪ್ರಯತ್ನ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಉತ್ತರ ಕರ್ನಾಟಕದ ಪ್ರವಾಸದಲ್ಲಿದ್ದಾರೆ. ಸಿದ್ದರಾಮಯ್ಯ ಕೈ ಸೇರಿರುವ ವರದಿಯ ಪ್ರಕಾರ, ಕೋಲಾರದಲ್ಲಿ ಅಹಿಂದ ತಂತ್ರ ವರ್ಕೌಟ್ ಆಗುವುದು ಅನುಮಾನ ಎನ್ನಲಾಗಿದೆ. ಕಾಂಗ್ರೆಸ್ ಕೋಲಾರ ಕ್ಷೇತ್ರದಲ್ಲಿ ಬೂತ್ ಮಟ್ಟದ ನಾಯಕರಿಲ್ಲ. ಈಗಾಗಲೇ ಅಹಿಂದ ಮತಗಳು ಚದುರಿ ಹೋಗಿವೆ. ಆ ಮತಗಳೆಲ್ಲಾ ಜೆಡಿಎಸ್ – ಬಿಜೆಪಿ ಪಾಲಾಗಿವೆ. ಅಹಿಂದ ಮತಗಳನ್ನು ನಂಬಿ ಸಿದ್ದರಾಮಯ್ಯ ಸ್ಪರ್ಧೆ ಮಾಡುವ ಧೈರ್ಯ ಮಾಡುವಂತಿಲ್ಲ. ಹೊಸದಾಗಿ ಮತ್ತೆ ಎಲ್ಲವನ್ನು ತನ್ನತ್ತ ಸೆಳೆಯುವ ಸಾಹಸಕ್ಕೆ ಕೈ ಹಾಕಲು ಸಮಯವೂ ಇಲ್ಲ. ಹೀಗಾಗಿ ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆಯೇ ಬೆಟರ್ ಎನ್ನುವುದು ಹಲವರ ಅಭಿಪ್ರಾಯವಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್