ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಟರ್ಕಿ ಮತ್ತು ಸಿರಿಯಾದಲ್ಲಿ ಅಕ್ಷರಶಃ ಸ್ಮಶಾನವಾಗಿದೆ. ಭೂಕಂಪನದ ಹೊಡೆತಕ್ಕೆ ಸಿಲುಕಿ ಅಲ್ಲಿನ ಜನ ನಲುಗಿ ಹೋಗಿದ್ದಾರೆ. ದಿನೇ ದಿನೇ ಸಾವಿನ ಸಂಖ್ಯೆ ಜಾಸ್ತಿಯಾಗುತ್ತಾ ಇದೆ. ಈಗಾಗಲೇ ಸಾವಿನ ಸಂಖ್ಯೆ 36 ಸಾವಿರಕ್ಕೆ ಏರಿಕೆಯಾಗಿದೆ. ಇದರ ನಡುವೆ ಭೂಕಂಪದ ಅವಶೇಷಗಳಡಿ ಸಿಲುಕಿರುವ ಮಕ್ಕಳನ್ನು ಹೊರ ತೆಗೆದಾಗ ಸೈನಿಕರು ಕಣ್ಣುಗಳು ಒದ್ದೆಯಾಗುತ್ತಿವೆ, ಮನಸ್ಸು ಮರುಗುತ್ತಿದೆ.
ಸುಮಾರು ಎಂಟು ದಿನದಿಂದ ಸಿರಿಯಾ ಮತ್ತು ಟರ್ಕಿ ಎರಡು ದೇಶದಲ್ಲಜ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅವಶೇಷಗಳಡಿ ಸಿಲುಕಿದವರನ್ನು ರಕ್ಷಣೆ ಮಾಡುತ್ತಿದ್ದಾರೆ. ಜನಿಸಿದ ಐದು ತಿಂಗಳ ಮಗುವು ಅವಶೇಷಗಳಡಿ ಸಿಲುಕಿತ್ತು. ಸುಮಾರು 100 ಗಂಟೆಗಳ ಬಳಿಕ ಆ ಮಗುವನ್ನು ಹೊರತೆಗೆಯಲಾಗಿದೆ. ಅದು ಸುರಕ್ಷಿತವಾಗಿ. ಹಾಲು, ಹಾರೈಕೆಯಿಲ್ಲದೆ ಆ ಮಗು ಆ ಅವಶೇಷಗಳಡಿ ಬದುಕಿದ್ದೆ ಹೆಚ್ಚು.
ಅಷ್ಟೇ ಅಲ್ಲ 13 ವರ್ಷದ ಬಾಲಕ ಕೂಡ ಅವಶೇಷಗಳಡಿ ಸಿಲುಕಿದ್ದ. ಸುಮಾರು 138 ಗಂಟೆಗಳ ಬಳಿಕ ಆತನನ್ನು ಹೊರ ತರಲಾಗಿದೆ. ಹಸಿವಿನಿಂದ ಬಳಲುತ್ತಿದ್ದ ಬಾಲಕ ಹೊರಗೆ ಬಂದೊಡನೆ ರಕ್ಷಣಾ ಸಿಬ್ಬಂದಿ ನೋಡಿ ನಿಟ್ಟುಸಿರು ಬಿಟ್ಟಿದ್ದಾನೆ. 104 ಗಂಟೆಯಿಂದ ಅವಶೇಷಗಳಡಿ ಸಿಲುಕಿದ್ದ 43 ವರ್ಷದ ವ್ಯಕ್ತಿಯನ್ನು ಹೊರತಂದಿದ್ದಾರೆ. ಹೀಗೆ ಆ ಮಕ್ಕಳು, ವಯಸ್ಸಾದವರನ್ನು ನೋಡಿ ಸೈನಿಕರು ಕಣ್ಣೀರು ಹಾಕಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್