Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋಲಾರದಲ್ಲಿ ಕಾಂಗ್ರೆಸ್ ನವರೇ ಸೋಲಿಸಿದರೆ.. ಬೇರೆ ಕಡೆ ನಾವೂ ಸೋಲಿಸುತ್ತೇವೆ : ಸಿದ್ದರಾಮಯ್ಯರನ್ನ ಟಾರ್ಗೆಟ್ ಮಾಡಿದ ನಳೀನ್ ಕುಮಾರ್ ಕಟೀಲು..!

Facebook
Twitter
Telegram
WhatsApp

ಕೊಪ್ಪಳ: ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಟಾರ್ಗೆಟ್ ಆಗಿದ್ದಾರೆ. ಅವರನ್ನು ಸೋಲಿಸಲೇಬೇಕೆಂದು ಪಣ ತೊಟ್ಟಿದ್ದಾರೆ. ಇಂದು ನಳೀನ್ ಕುಮಾರ್ ಕಟೀಲು ಕೂಡ ಅದನ್ನೇ ಹೇಳಿದ್ದಾರೆ. ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ರಾಜಕೀಯ ನಿರುದ್ಯೋಗಿಯಾಗಲಿದ್ದಾರೆ. ಅವರು ಎಲ್ಲಿಯೇ ನಿಂತರು ಅವರನ್ನು ಸೋಲಿಸುತ್ತೇವೆ ಎಂದಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರ ಸಿಗುತ್ತಿಲ್ಲ. ಅವರುಗೆ ಸ್ವತಂತ್ರ ಕ್ಷೇತ್ರ ಸಿಗುತ್ತಿಲ್ಲ. ಪರಿಸ್ಥಿತಿ ಈ ರೀತಿ ಇರುವಾಗ ಅವರ ಪಕ್ಷ ಅಧಿಕಾರಕ್ಕೆ ಬರುವುದಾದರೂ ಹೇಗೆ..? ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಿದರೆ ಕಾಂಗ್ರೆಸ್ ನವರೇ ಅವರನ್ನು ಅಲ್ಲಿ ಸೋಲಿಸುತ್ತಾರೆ. ಬೇರೆ ಯಾವುದೇ ಕ್ಷೇತ್ರದಲ್ಲಿ ನಿಂತರೂ ನಾವೇ ಸೋಲಿಸುತ್ತೇವೆ ಎಂದಿದ್ದಾರೆ.

ಸಿದ್ದರಾಮಯ್ಯ ಅವರು ರಾಜಕೀಯ ಬಿಟ್ಟು ಭವಿಷ್ಯ ಹೇಳುವುದು ಒಳ್ಳೆಯದು. ಪ್ರಧಾನಿ ಮೋದಿಯವರು ಅಪ್ಪನಾಣೆಗೂ ಪಿಎಂ ಆಗಲ್ಲ ಅಂದಿದ್ರು ಒಂದು ಅಲ ಅಲ್ಲ ಎರಡು ಬಾರಿ ಪ್ರಧಾನಿಯಾಗಿದ್ದಾರೆ. ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಲ್ಲ ಅಂದಿದ್ರು ಅವರು ಸಿಎಂ ಆದರು. ಹೀಗಾಗಿ ಅವರು ಹೇಳುವುದು ಯಾವುದು ನಡೆಯುವುದಿಲ್ಲ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!