Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮಯ ಮುಗಿಯುತ್ತಿದೆ.. ಅದಕ್ಕೆ ತರಾತುರಿಯಲ್ಲಿ ಹಣ ಮಾಡಲು ನಿಂತಿದ್ದಾರೆ : ಸಿದ್ದರಾಮಯ್ಯ ಆಕ್ರೋಶ..!

Facebook
Twitter
Telegram
WhatsApp

ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವಾಗಲೇ ಬಿಜೆಪಿಯ ಒಂದೊಂದೆ ವಿಚಾರವನ್ನು ತೆಗೆದು ಕಾಂಗ್ರೆಸ್ ಪಕ್ಷ ಕಿಡಿಕಾರುತ್ತಿದೆ. 40% ಕಮಿಷನ್ ಸರ್ಕಾರ ಎಂದು ಈಗಾಗಲೇ ಅಭಿಯಾನ ಶುರು ಮಾಡಿದೆ, ಪೇಸಿಎಂ ಅಭಿಯಾನದಿಂದ ದೊಡ್ಡ ಮಟ್ಟಕ್ಕೆ ಕಿಡಿ ಹಚ್ಚಿತ್ತು. ಇದೀಗ ಟೆಂಡರ್ ದಂಧೆ ಬಗ್ಗೆ ಕಾಂಗ್ರೆಸ್, ಬಿಜೆಪಿ ಮೇಲೆ ಹೌಹಾರಿದೆ.

ಇಂದು ಬೆಳಗ್ಗೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆಯಲ್ಲಿ ಸುದ್ದಿಗೋಷ್ಟಿ ನಡೆಸಿದ ಕಾಂಗ್ರೆಸ್ ನಾಯಕರು, ಬಿಜೆಪಿಯ ವಿರುದ್ಧ ಹಲವು ದಾಖಲೆಗಳನ್ನು ಹೊರ ಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಅಸಮಾಧಾನ ಇರುವವರು ಟೆಂಡರ್ ಅನುಮತಿ ಪಡೆದುಕೊಳ್ಳುತ್ತಿದ್ದಾರೆ. ತರಾತುರಿಯಲ್ಲಿ ಹಣ ಮಾಡಲು ಅನುಮತಿ ನೀಡಲಾಗುತ್ತಿದೆ. ಕಮಿಷನ್ ಹೊಡೆಯುವುದಕ್ಕೆ ಹೀಗೆ ಮಾಡುತ್ತಿದ್ದಾರೆ.

ಇದು ಕೂಡ 40% ಮುಂದುವರೆದ ಭಾಗವಾಗಿದೆ. ಇದೆಲ್ಲಾ ಜನರ ತೆರಿಗೆ ಹಣ. ಹಾಳಾಗುವುದಕ್ಕೆ ನಾವೂ ಬಿಡುವುದಿಲ್ಲ. ಅದನ್ನು ರಕ್ಷಣೆ ಮಾಡುವ ಜವಬ್ದಾರಿ ನಮ್ಮದು. ಟೆಂಡರ್ ಹಣವನ್ನು ಹೆಚ್ಚು ಮಾಡಿದ್ದಾರೆ. ಯಾರೂ ಕಮಿಷನ್ ಹೆಚ್ಚಾಗಿ ನೀಡುತ್ತಾರೋ ಅವರಿಗೆ ಟೆಂಡರ್ ನೀಡಲಾಗುತ್ತಿದೆ. ಇದಕ್ಕಾಗಿಯೇ ಸಿಎಂ ಕಚೇರಿಯಲ್ಲಿ ಒಬ್ಬನನ್ನು ಇಡಲಾಗಿದೆ. ನಾವೂ ಇಷ್ಟಕ್ಕೆ ಸುಮ್ಮನೆ ಕೂರುವುದಿಲ್ಲ. ನ್ಯಾಯಾಲಯದ ಮೊರೆ ಹೋಗುತ್ತೇವೆ. ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್ : ತುರ್ತು ಸುದ್ದಿಗೋಷ್ಠಿ ನಡೆಸಿ 15 ಪ್ರಶ್ನೆ ಕೇಳಿದ ಕುಮಾರಸ್ವಾಮಿ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ,

ತಂದೆ-ತಾಯಿಯ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ : ಕುಮಾರಸ್ವಾಮಿ ಆಕ್ರೋಶ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ನವರೇ ದೇವೇಗೌಡರಿಂದ ನೀವೂ ಬೆಳೆದಿದ್ದೀರಿ. ಅವರು ಏನಂತಾ ನನಗಿಂತ

ಸಂಸತ್ ಪ್ರವೇಶಿಸಿ, ಮೋದಿ ಪರ ಕೈ ಎತ್ತುತ್ತೇನೆ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಇಂದು ಲೋಕಸಭೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ಬಾರಿ ಹೆಚ್ಚು ಸದ್ದು ಮಾಡಿದ್ದು ಮಾತ್ರ ಶಿವಮೊಗ್ಗ ಕ್ಷೇತ್ರ. ಚುನಾವಣೆಯಲ್ಲಿ ಮಗನಿಗೆ ಟಿಕೆಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಎಷ್ಟೋ ವರ್ಷಗಳಿಂದ ಬಿಜೆಪಿಯಲ್ಲಿದ್ದ ಈಶ್ವರಪ್ಪ,

error: Content is protected !!