Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿಯವರ ಮುಂದೆ ರಾಹುಲ್ ಗಾಂಧಿ ಕರೆದುಕೊಂಡು ಬರ್ತೀರಾ..? : ಬಿಎಸ್ವೈ, ಸಿಟಿ ರವಿ ಕೆಂಡಾಮಂಡಲ..!

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ಹೊತ್ತಿಸಿದ ಟೆಂಡರ್ ಕಿಡಿ ಈಗ ಬಿಜೆಪಿ ನಾಯಕರಿಗೆ ತಲೆ ಕೆಡಿಸಿದೆ. ಕಾಂಗ್ರೆಸ್ ನಾಯಕರ ಮಾತಿಗೆ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಸಿಟಿ ರವಿ ಮಾತನಾಡಿ, ಅವರ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ದಾಖಲೆಗಳು ಇಲ್ಲದೆ ಇರುವಂತ ಆರೋಪ ನಿಮ್ಮದು. ಗಾಳಿಯಲ್ಲಿ ಗುಂಡು ಆರಿಸುವುದರಲ್ಲಿ ನಿಸ್ಸೀಮರು. ದಾಖಲೆಗಳಿದ್ದರೆ ಕೊಡಿ. ಇಷ್ಟೆಲ್ಲಾ ದಾಖಲೆಗಳಿದ್ದರೆ ವಿಧಾನಸೌಧದಲ್ಲಿ ಯಾಕೆ ಹೇಳಲಿಲ್ಲ. ವಿಧಾನಸೌಧದಲ್ಲಿ ಮಾತನಾಡಿ ಎಂದರೆ ಮಾತನಾಡಲ್ಲ. ಸುಮ್ಮನೆ ಹೊರಗೆ ಬಂದು ಮಾತನಾಡುತ್ತಾರೆ. ವಿಕ್ಷಗಳ ಬಳಿ ದಾಖಲೆ ಇದ್ದರೆ, ಎಸಿಬಿ, ಲೋಕಾಯುಕ್ತಕ್ಕೆ ದೂರು ಕೊಡಲಿ. ಅವರಿಗೂ ಸ್ವತಂತ್ರ್ಯವಿದೆ. ಯಾರಿಗೂ ನಾವೂ ನಿರಾಕರಿಸುತ್ತಿಲ್ಲ ಎಂದಿದ್ದಾರೆ.

 

ಈ ಬಗ್ಗೆ ಯಡಿಯೂರಪ್ಪ ಮಾತನಾಡಿ, ಕಳೆದ ಎಂಟು ವರ್ಷದಲ್ಲಿ ಪ್ರಧಾನಿ‌ ಮೋದಿಯವರು ದೇಶ ವಿದೇಶ ಸುತ್ತಿ‌ ಬಂದರು ವಿಶ್ರಾಂತಿ ತೆಗೆದುಕೊಳ್ಳದೆ ದೇಶ ಸೇವೆ ಮಾಡುತ್ತಿರುವ ಪ್ರಧಾನಿ ಮೋದಿಯವರು ನಮ್ಮ ಜೊತೆ ಇದ್ದಾರೆ. ಇದ್ಯಾರೋ ಯಂಕ – ನಾಣಿ – ಸೀನನಿಗೆ ತಲೆ ಕೆಡಿಸಿಕೊಳ್ಳುವುದು ಬೇಡ. ಮೋದಿಯವರ ಬಗ್ಗೆ ಜನ ಎಷ್ಟು ಭರವಸೆ ಇಟ್ಟಿದ್ದಾರೆ ಗೊತ್ತಿದೆ. ರಾಹುಲ್ ಗಾಂಧಿ ಬಿಜೆಪಿಗೆ ಸವಾಲು ಆಗುವುದಕ್ಕೆ ಸಾಧ್ಯವಾ. ಈ ಕಾಂಗ್ರೆಸ್ ನವರು ಯಂಕ, ನಾಣಿ, ಸೀನಾ ಅಂತಾರೆ. ಯಾರೋ ಏನೋ ಹೇಳುತ್ತಾರೆ ಅಂತ ತಲೆಕೆಡಿಸಿಕೊಳ್ಳವೇಡಿ. ಕಾಂಗ್ರೆಸ್ ನಾಯಕರು ತಿರುಕನ ಕನಸು ಕಾಣುತ್ತಿದ್ದಾರೆ.

ನಾನು ಕಾಂಗ್ರೆಸ್ ನವರುಗೆ ಒಂದು ಪ್ರಶ್ನೆ ಕೇಳುತ್ತೇನೆ. ನಿಮ್ಮ ನಾಯಕ ಯಾರು..? ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಮೋದಿ ಅವರ ಎದುರು ಮತ ಕೇಳುತ್ತೀರಾ..? ಯಾರು ಭಯ ಪಡುವುದು ಬೇಡ. ಈ ಬಾರಿಯೂ ನಾವೇ ಅಧಿಕಾರಕ್ಕೆ ಬರುವುದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಡಾ ಪ್ರಭಾ ಮಲ್ಲಿಕಾರ್ಜುನ್ ಬಹುಮತದಿಂದ ಗೆಲ್ತಾರೆ : ಪರಮೇಶ್ವರ್ ವಿಶ್ವಾಸ

ದಾವಣಗೆರೆ : ಎರಡನೇ ಹಂತದ ಚುನಾವಣೆಯ 14 ಕ್ಷೇತ್ರಗಳಲ್ಲಿ ಗ್ಯಾರೆಂಟಿ ಭರವಸೆ ಈಡೇರಿಕೆಯಿಂದ ಬದಲಾವಣೆ ಗಾಳಿ ಬೀಸುತ್ತಿದೆ. ಪ್ರಧಾನಿಗಳು ಮತ್ತು ಗೃಹ ಸಚಿವರು ರಾಜ್ಯಕ್ಕೆ ಬಂದಾಗ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಂತಾ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ಪೋಕ್ಸೋ ಸುಮೊಟೋ ಕೇಸು ದಾಖಲಿಸಿ : ವಕೀಲ ಡಾ. ಎಂ.ಸಿ.ನರಹರಿ ಆಗ್ರಹ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 01: ಸಂಸದ ಪ್ರಜ್ವಲ್ ರೇವಣ್ಣನಿಂದ ಅನೇಕರ ಮೇಲೆ ಅತ್ಯಾಚಾರ, ಲೈಂಗಿಕ ರಾಸಲೀಲೆ ಹಿನ್ನೆಲೆಯಲ್ಲಿ ಗಲ್ಲು

ಶುಕ್ರವಾರ ಮಧ್ಯರಾತ್ರಿ ಬೆಂಗಳೂರಿಗೆ ಬರುವ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗುತ್ತಾರಾ..?

ಬೆಂಗಳೂರು: ರಾಜ್ಯದೆಲ್ಲೆಡೆ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರವೇ ಸಾಕಷ್ಟು ಸದ್ದು ಮಾಡುತ್ತಿದೆ. ಸಾಮಾನ್ಯ ಜನರ ಮೊಬೈಲ್ ಗಳಲ್ಲೂ ಹೆಣ್ಣು ಮಕ್ಕಳ ಅಶ್ಲೀಲ ಫೋಟೋ ಓಡಾಡುತ್ತಿವೆ. ಇದೊಂದು ಗಂಭೀರ ಪ್ರಕರಣವಾಗಿದೆ. ಆದರೆ ಪ್ರಜ್ವಲ್

error: Content is protected !!