ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು : ಪಂಚಮಸಾಲಿ ಮೀಸಲಾತಿ ಹೋರಾಟದ ವೇದಿಕೆಯಲ್ಲಿ ರಾಜಕೀಯದ ಚರ್ಚೆ ಜೋರಾಗಿದೆ. ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದ ವೇದಿಕೆಯಲ್ಲಿ ಗೋಕಾಕ್ ಕ್ಷೇತ್ರದ ಮತಕ್ಷೇತ್ರದ ಬಗ್ಗೆ ಚರ್ಚೆಯಾಗಿದೆ.
ಗೋಕಾಕ್ ಕ್ಷೇತ್ರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಲ್ಲಿಸಬೇಕು. ಈ ದುಷ್ಟ ಸಾಮ್ರಾಜ್ಯ ಬೆಳಗಾವಿಯಿಂದ ಚನ್ನಮ್ಮನಿಂದ ಅಂತ್ಯವಾಗಲಿ. ಬೆಳಗಾವಿತ ಚನ್ನಮ್ಮನಿಂದ ಇದು ಅಂತ್ಯವಾಗಲಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಮನವಿ ಮಾಡಿದ್ದಾರೆ.
ಮುಂದುವರೆದು ಮಾತನಾಡಿದ ಮುಖಂಡ, ಹೆಬ್ಬಾಳ್ಕರ್ ಅಕ್ಕನನ್ನು ಗೋಕಾಕ್ ನಲ್ಲಿ ತಂದು ನಿಲ್ಲಿಸೋಣಾ. ನಿಮ್ಮ ಪಾದಕ್ಕೆ ನಮ್ಮ ಮನವಿ ಇದು ಎಂದು ಜಯಮೃತ್ಯುಂಜಯ ಸ್ವಾಮೀಜಿ ಎದುರು ಬೇಡಿಕೆ ಇಟ್ಟಿದ್ದಾರೆ. ಬೆಳಗಾವು ನಾಯಕರು ಬೆಂಗಳೂರಿನಲ್ಲಿ ಸ್ವಾಮೀಜಿಯನ್ನು ಭೇಟಿ ಮಾಡಿ ಈ ಮನವಿ ಮಾಡಿದ್ದಾರೆ.
ಈ ಬಾರಿ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಬಿಗ್ ಫೈಟ್ ಏರ್ಪಡಲಿದೆ. ಒಂದು ಕಡೆ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ತೆಗೆದು ಸಿಬಿಐಗೆ ವಹಿಸಲು ಪ್ಲ್ಯಾನ್ ಮಾಡುತ್ತಾ ಇದ್ದರೆ, ಇತ್ತ ಲಕ್ಷ್ಮೀ ಹೆಬ್ಬಾಳ್ಕರ್ ರಮೇಶ್ ಜಾರಕಿಹೊಳಿಗೆ ಚುನಾವಣೆಯ ಸ್ಪರ್ಧೆಯ ಮೂಲಕ ಟಾಂಗ್ ಕೊಡಲು ಸಿದ್ಧರಾಗಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್