ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರಾಜ್ಯದಲ್ಲಿ ಚುನಾವಣೆಯ ಬಿಸಿ ರಂಗೇರಿದೆ. ಈ ಬಾರಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕು ಎಂದುಕೊಂಡಿರುವ ಮೂರು ಪಕ್ಷಗಳು ಸಿಕ್ಕಾಪಟ್ಟೆ ಓಡಾಟ ನಡೆಸುತ್ತಿವೆ. ಇದರ ನಡುವೆ ಬೊಮ್ಮನಹಳ್ಳಿಯ ಪ್ರಭಾವಿ ಬಿಜೆಪಿ ಶಾಸಕನನ್ನು ಮುಗಿಸಲು ಸ್ಕೆಚ್ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ.
ಬಿಜೆಪಿ ಶಾಸಕ ಸತೀಶ್ ರೆಡ್ಡಿಯನ್ನು ಕೊಲೆ ಮಾಡುವುದಕ್ಕೆ 2 ಕೋಟಿ ರೂಪಾಯಿ ಸುಪಾರಿ ನೀಡಲಾಗಿದೆ. ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಟೀಂ ಶಾಸಕ ಸತೀಶ್ ರೆಡ್ಡಿ ಕೊಲೆಗೆ ಸ್ಕೆಚ್ ಹಾಕಲಾಗಿತ್ತು. ಅದೇ ಕಾರಣಕ್ಕೆ ಅವರು ಹೋದಲ್ಲಿ ಬಂದಲ್ಲೆಲ್ಲಾ ಫಾಲೋ ಮಾಡುತ್ತಿದ್ದರು. ಸತೀಶ್ ರೆಡ್ಡಿ ಅದೃಷ್ಟ ಚೆನ್ನಾಗಿತ್ತು ಎನಿಸುತ್ತದೆ. ಸ್ಕೆಚ್ ಗೂ ಮುನ್ನವೇ ನಾಗನ ಪ್ಲ್ಯಾನ್ ಲೀಕ್ ಆಗಿದೆ.
ಎಂಲ್ಎ ಬೆಂಬಲಿಗನೊಬ್ಬ ಚಿತ್ರದುರ್ಗದಲ್ಲಿದ್ದ ನಾಗನ ಗ್ಯಾಂಗ್ ಹುಡುಗ ಆಕಾಶ್ ಗೆ ಕರೆ ಮಾಡಿದ್ದಾರೆ. ಎಂಎಲ್ಎ ಸ್ಕೆಚ್ ಬಗ್ಗೆ ಮಾಹಿತಿ ಕೇಳಿದ್ದಾನೆ. ಆಗ ಆಕಾಶ್ ಹಾಕಿದ್ದ ಸ್ಕೆಚ್ ಸೇರಿದಂತೆ ಎಲ್ಲಾ ಮಾಹಿತಿಯನ್ನು ಹಂಚಿಕೊಂಡಿದ್ದಾನೆ. ಇದೀಗ ಆ ಆಡಿಯೋವನ್ನು ಪೊಲೀಸರಿಗೆ ನೀಡಲಾಗಿದೆ. ಸದ್ಯ ಆರೋಪಿಗಳನ್ನು ಪೊಲೀಸರು ಹುಡುಕುತ್ತಿದ್ದಾರೆ. ಇತ್ತ ಸತೀಶ್ ರೆಡ್ಡಿ ಅಲರ್ಟ್ ಆಗಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್