Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ರಾಜ್ಯದ ಬಜೆಟ್ : ಯಾವುದಕ್ಕೆಲ್ಲಾ ರಿಯಾಯಿತಿ, ಯಾರಿಗೆಲ್ಲಾ ನಿರೀಕ್ಷೆ ಇದೆ..?

---Advertisement---

ಬೆಂಗಳೂರು: 2023-24ನೇ ಸಾಲಿನ ಬಜೆಟ್ ಮಂಡನೆಗೆ ಸಮಯ ಹತ್ತಿರವಾಗಿದೆ. ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಅನ್ನು ನಾಳೆ ಸಿಎಂ ಬಸವರಾಜ್ ಮಂಡಿಸಲಿದ್ದಾರೆ. ಸದ್ಯ ಚುನಾವಣೆ ಕೂಡ ಹತ್ತಿರವಿರುವ ಕಾರಣ ಸಿಎಂ ಬೊಮ್ಮಾಯಿ ಅವರು ಮಂಡಿಸುವ ಬಜೆಟ್, ಚುನಾವಣೆಗೂ ಅನುಕೂಲವಾಗಬೇಕು, ಪಕ್ಷಕ್ಕೂ ಪ್ಲಸ್ ಪಾಯಿಂಟ್ ಆಗಬೇಕು. ಜೊತೆಗೆ ಕಾಂಗ್ರೆಸ್ ಪ್ರಣಾಳಿಕೆಗೆ ಸೆಡ್ಡು ಹೊಡೆಯುವಂತ ಬಜೆಟ್ ಮಂಡನೆ ಮಾಡುವುದಕ್ಕೆ ಬಿಜೆಪಿ ಪಕ್ಷ ಸಿದ್ಧತೆ ನಡೆಸಿದೆ. ಪಕ್ಕಾ ಚುನಾವಣಾ ಲೆಕ್ಕಚಾರದಲ್ಲಿಯೇ ನಾಳಿನ ಬಜೆಟ್ ಇರಲಿದೆ ಎನ್ನಲಾಗಿದೆ.

ನಾಳೆ ಬೆಳಗ್ಗೆ 10.30ಕ್ಕೆ ಸರಿಯಾಗಿ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಎರಡನೇ ಬಜೆಟ್ ಆಗಿರಲಿದೆ. ಈ ಬಾರಿಯ ಬಜೆಟ್ ಗಾತ್ರ ಸುಮಾರು 3 ಲಕ್ಷ ಕೋಟಿ ರೂ ದಾಟುವ ಸಾಧ್ಯತೆ ಇದೆ. ಚುನಾವಣೆ ಬೇರೆ ಹತ್ತಿರವಿರುವ ಕಾರಣ ಸಹಜವಾಗಿಯೇ ಸಾಮಾನ್ಯ ಜನರಿಗೂ ನಿರೀಕ್ಷೆ ಇದೆ.

ಈ ಬಾರಿ ಹೆಚ್ಚಿನ ತೆರಿಗೆ ಹಣ ಸಂಗ್ರಹವಾಗಿದ್ದು ತೆರಿಯಲ್ಲಿ ವಿನಾಯ್ತಿ ಘೋಷಣೆ ಮಾಡುವ ನಿರೀಕ್ಷೆ ಇದೆ. ತೆರಿಗೆ ಹೊರೆಯಿಂದ ಜನರನ್ನು ಮುಕ್ತ ಮಾಡುವಂತ ಬಜೆಟ್ ಇದಾಗಲಿದೆ ಎನ್ನಲಾಗುತ್ತಿದೆ. ಇನ್ನು ರೈತರು, ಮಹಿಳೆಯರು, ಎಸ್ಸಿ/ಎಸ್ಟಿ ಸಮುದಾಯದವರಿಗಾಗಿ, ಹಿಂದುಳಿದ ವರ್ಗಗಳಿಗಾಗಿ ಒತ್ತು ನೀಡುವಂತ ಬಜೆಟ್ ಇದಾಗಿರಲಿದೆ ಎನ್ನಲಾಗುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...