Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುವೆಂಪು ಹೆಸರಿಡಲು ಹೊರಟ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡವೇ ಮಾಯಾ..!

Facebook
Twitter
Telegram
WhatsApp

 

 

ಶಿವಮೊಗ್ಗ: ಜಿಲ್ಲೆಯ ವಿಮಾನ ನಿಲ್ದಾಣ ದೇಶದ ಗಮನ ಸೆಳೆದಿದೆ. ವಿಮಾನ ನಿಲ್ದಾಣಕ್ಕೆ ಹೆಸರಿಡುವ ವಿಚಾರವಾಗಿಯೇ ಸಾಕಷ್ಟು ಗೊಂದಲವಾಗಿತ್ತು. ಶಿವಮೊಗ್ಗಕ್ಕಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ ಕಾರಣಕ್ಕಾಗಿ ಯಡಿಯೂರಪ್ಪ ಅವರ ಹೆಸರನ್ನಿಡಲು ಸೂಚಿಸಲಾಗಿತ್ತು. ಬಳಿಕ ಬಂಗಾರಪ್ಪ ಅವರ ಹೆಸರನ್ನು ಸೂಚಿಸಲಾಗಿತ್ತು. ಎಲ್ಲಾ ವಾದ ವಿವಾದಗಳ ಬಳಿಕ ಯಡಿಯೂರಪ್ಪ ಅವರೇ ಕುವೆಂಪು ಅವರ ಹೆಸರನ್ನು ಸೂಚಿಸಲಾಗಿತ್ತು. ಇದೀಗ ವಿಮಾನ ನಿಲ್ದಾಣ ವಿವಾದಕ್ಕೆ ಗುರಿಯಾಗಿದೆ.

ವಿಮಾನ ನಿಲ್ದಾಣದಲ್ಲಿ ಕನ್ನಡ ಸೂಚನ ಫಲಕವನ್ನೇ ಹಾಕಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಟ್ವಿಟ್ಟರ್, ಫೇಸ್ಬುಕ್ ಗಳಲ್ಲಿ ಕನ್ನಡಿಗರು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ಕನ್ನಡವೇ ಇಲ್ಲದಿರುವ ಫೋಟೋಗಳನ್ನು ಹಂಚಿಕೊಂಡು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.


ನಿರ್ದೇಶಕ ಮಂನ್ಸೋರೆ ಅವರು ಕೂಡ ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ. “ಕನ್ನಡ ಎಲ್ರಪ್ಪಾ???? 😡😡😡😡
ಈ ನಿಲ್ದಾಣಕ್ಕೆ ಕುವೆಂಪು ಹೆಸ್ರು ಇಡ್ತೀವಿ ಅಂತೀರಾ. ಆ ಹೆಸರಿಟ್ಟು ಕನ್ನಡ ಇಲ್ದೆ ಅವ್ರಿಗೂ ಅವಮಾನ ಮಾಡೋದಿಕ್ಕಾ???” ಎಂದು ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!