Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಕ್ರೇನ್ ಗೆ ಬೈಡನ್ ಭೇಟಿ ಬೆನ್ನಲ್ಲೇ ರಷ್ಯಾಗೆ ಚೀನಾ ಅಧ್ಯಕ್ಷರ ಭೇಟಿ ಯಾವ ಕಾರಣಕ್ಕೆ..?

Facebook
Twitter
Telegram
WhatsApp

ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಶುರುವಾಗಿ ನಾಳೆಗೆ ಒಂದು ವರ್ಷ. ಅದೆಷ್ಟೋ ಸಾವಿರ ಜನ ಈ ಯುದ್ಧದಿಂದ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಅದೆಷ್ಟೋ ಮಕ್ಕಳು ಅನಾಥರಾಗಿದ್ದಾರೆ. ಆದ್ರೂ ಕೂಡ ಇನ್ನು ಯುದ್ಧ ನಿಂತಿಲ್ಲ. ಉಕ್ರೇನ್ ಸಣ್ಣ ದೇಶವಾದರೂ ತಮ್ಮ ಜನರನ್ನು ರಕ್ಷಿಸಿಕೊಳ್ಳಲು, ತಮ್ಮ ದೇಶ ಉಳಿಸಿಕೊಳ್ಳುವುದಕ್ಕೆ ಶಕ್ತಿ‌ಮೀರಿ ಯುದ್ಧ ನಡೆಸುತ್ತಲೇ ಇದೆ.

ಇತ್ತಿಚೆಗಷ್ಟೇ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಉಕ್ರೇನ್ ಗೆ ಭೇಟಿ ನೀಡಿ, ಯುದ್ಧಪೀಡಿತ ಪ್ರದೇಶವನ್ನು ವೀಕ್ಷಿಸಿ, ಮತ್ತಷ್ಟು ಸಹಾಯದ ಭರವಸೆಯನ್ನು ನೀಡಿ, ಹೋಗಿದ್ದರು. ಇದೀಗ ರಷ್ಯಾಗೆ ಚೀನಾ ಅಧ್ಯಕ್ಷ ಜಿನ್ ಪಿಂಗ್ ಭೇಟಿ ನೀಡುತ್ತಿದ್ದಾರೆ. ಈ ಭೇಟಿ ಹಲವು ಕುತೂಹಲಕ್ಕೆ ಕಾರಣವಾಗಿದೆ.

ಚೀನಾದ ಉನ್ನತ ಅಧಿಕಾರಿ ವಾಂಗ್ ಯಿ ಅವರು ಮಾಸ್ಕೋಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡುವಾಗ ಅಧ್ಯಕ್ಷರ ಭೇಟಿ ಬಗ್ಗೆ ಸುಳಿವು ನೀಡಿದ್ದಾರೆ. ರಷ್ಯಾ ಅಧ್ಯಕ್ಷ ಪುಟೀನ್ ಕೂಡ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಂಬಂಧ ವಾಲ್ ಸ್ಟ್ರೀಟ್ ಎಂಬ ಜರ್ನಲ್ ವರದಿ ಮಾಡಿದ್ದು, ಬಹುಪಕ್ಷೀಯ ಮಾತುಕತೆಗಾಗಿ ಜಿನ್ ಪಿಂಗ್ ಬರುತ್ತಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ನಿಲ್ಲಿಸುವ ಬಗ್ಗೆ ಪುಟೀನ್ ಜೊತೆಗೆ ಮಾತನಾಡಲಿದ್ದಾರೆ ಎನ್ನಲಾಗಿದೆ.

ಇನ್ನು ಈ ಸಂಬಂಧ ರಷ್ಯಾ ಅಧ್ಯಕ್ಷ ಪುಟೀನ್ ಮಾತನಾಡಿದ್ದು, ಎಲ್ಲವೂ ಕೂಡ ಬೆಳವಣಿಗೆಯಲ್ಲಿದೆ. ನಾವೂ ದೇಶಕ್ಕೆ ಹೊಸ ಗಡಿಯನ್ನು ಪಡೆಯುತ್ತಿದ್ದೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!