Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಟಿ ರವಿಗೆ ಹೊಸ ಬಿರುದು ನೀಡಿದ ಕಾಂಗ್ರೆಸ್..!

Facebook
Twitter
Telegram
WhatsApp

ಬೆಂಗಳೂರು: ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಾಂಸಾಹಾರ ಸೇವಿಸಿ, ನಾಗಬನಕ್ಕೆ ಪ್ರವೇಶ ಮಾಡಿದ್ದಾರೆ ಎಂಬುದು ಗೊತ್ತಾದ ಮೇಲೆ, ವಿರೋಧ ಪಕ್ಷದ ನಾಯಕರು ಸಖತ್ತಾಗಿಯೇ ಕ್ಲಾಸ್ ತೆಗೆದುಕೊಂಡಿದ್ದರು. ಮಾಂಸಾಹಾರ ಸೇವಿಸಿ ನಾಗಬನಕ್ಕೆ ಹೋಗಿದ್ದಕ್ಕೆ ಸಿಕ್ಕಾಪಟ್ಟೆ ಟೀಕೆಗಳು ವ್ಯಕ್ತವಾಗಿದ್ದವು.

ಆ ವಿಚಾರಕ್ಕೆ ಸಿಟಿ ರವಿ ಕೂಡ ಸ್ಪಷ್ಟನೆ ನೀಡಿದ್ದರು. ನಾನು ನಾಗಬನದ ಒಳಗೆ ಹೋಗಿರಲಿಲ್ಲ. ಹೊರಾಂಗಣದಲ್ಲಿಯೇ ನಿಂತು ನೋಡಿಕೊಂಡು ಬಂದಿದ್ದೇನೆ. ಕಾಂಗ್ರೆಸ್ ನವರ ರೀತಿ ಏನಿವಾಗ ನಾನು ಮಾಂಸ ತಿಂದೆ ದೇವಸ್ಥಾನಕ್ಕೆ ಹೋಗುತ್ತೇ‌ನೆ ಎಂಬ ಮಾತು ಆಡುವುದಿಲ್ಲ ಎಂದಿದ್ದರು. ಅದಾದ ಮೇಲೂ ಈ ಬಗ್ಗೆ ಚರ್ಚೆ ತಾರಕಕ್ಕೇರಿತ್ತು. ಇಂದು ಮತ್ತೆ ಸಿಟಿ ರವಿ ಉತ್ತರ ನೀಡಿ, ನಾನು ಮಾಂಸಾಹಾರ ತಿಂದಿದ್ದನ್ನು ಮರೆತಿದ್ದೆ ಎಂದು ಹೇಳಿದ್ದರು.

ಸಿಟಿ ರವಿ ಅವರ ಈ ಮಾತಿಗೆ ಕಾಂಗ್ರೆಸ್ ಹೊಸ ಬಿರುದು ನೀಡಿದೆ. ” ಬಿಜೆಪಿಗರದ್ದು ದಿನಕ್ಕೊಂದು ಸುಳ್ಳು, ಕ್ಷಣಕ್ಕೊಂದು ವೇಷ. ಹೊಟ್ಟೆಗೆ ಏನ್ ತಿಂದಿದ್ದೆ ಅನ್ನೋದನ್ನೇ ಮರೆತಿದ್ದ @CTRavi_BJP ಅವರಿಗೆ ಅಂದು ಆಕ್ಸಿಡೆಂಟ್ ಮಾಡಿದಾಗ ಕುಡಿದಿದ್ದೇನು ಅನ್ನೋದಾದ್ರೂ ನೆನಪಿದೆಯೇ?. ದೇವಸ್ಥಾನದ ಆವರಣ ಪ್ರವೇಶಿಸಿದ್ದಕ್ಕೆ ಸಾಕ್ಷಿ ಇದ್ದರೂ ಸುಳ್ಳು ಹೇಳುವ ಸಿ.ಟಿ ರವಿ – “ಬೆಸ್ಟ್ ಸುಳ್ಳುಗಾರ ಆಫ್ ದಿ ಇಯರ್”!!” ಎಂದು ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!