ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ಸದ್ಯ ಸಿಟಿ ರವಿ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದೇ ಅಸ್ತ್ರವಾಗಿ ಬಿಟ್ಟಿದೆ. ಚುನಾವಣೆಯ ಹತ್ತಿರವಾಗುತ್ತಿರುವ ಹೊತ್ತಲ್ಲಿ ವಿಪಕ್ಷ ನಾಯಕರಿಗೆ ಸಿಟಿ ರವಿ ಆಹಾರವಾಗಿದ್ದಾರೆ. ಇಂದು ಕಾಂಗ್ರೆಸ್ ಹಲವು ಕಾರ್ಯಕರ್ತರು ಸಿಟಿ ರವಿ ಅವರ ಕೊರಳಿಗೆ ನಲ್ಲಿ ಮೂಳೆ ನೇತಾಕಿದ್ದಂತ ಅಣಕು ಪ್ರದರ್ಶನ ಮಾಡಿದ್ದಾರೆ.
ಜೊತೆಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರಿಗೆ ನಲ್ಲಿ ಮೂಳೆ ಹಾಗೂ ಬಿರಿಯಾನಿಯನ್ನು ಪಾರ್ಸೆಲ್ ಕಳುಹಿಸಿರುವ ಯೂತ್ ಕಾಂಗ್ರೆಸ್ ಪಡೆ, ಸಿಟಿ ರವಿ ಅವರು ನಾನ್ ವೆಜ್ ತಿನ್ನುವ ರೀತಿಯನ್ನು ಅಣುಕು ಪ್ರದರ್ಶನ ಮಾಡಿದ್ದಾರೆ. ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಸಿಟಿ ರವಿಗೆ ಮುಜರಾಯಿ ಇಲಾಖೆ ನಿರ್ಬಂಧ ಹೇರಬೇಕೆಂದು ಯೂತ್ ಕಾಂಗ್ರೆಸ್ ಒತ್ತಡ ಹೇರಿದೆ.
ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಮಾಂದಾಹಾರ ಸೇವಿಸಿ ಧರ್ಮಸ್ಥಳಕ್ಕೆ ಹೋಗಿದ್ದರೆಂದು ದೊಡ್ಡಮಟ್ಟದ ವಿವಾದ ಸೃಷ್ಟಿಯಾಗಿತ್ತು. ಈ ವಿಚಾರವನ್ನು ಅಂದು ಕಟುವಾಗಿ ಟೀಕಿಸಿದ್ದ ಸಿಟಿ ರವಿ ಅವರು ಮಾಂಸಾಹಾರ ಸೇವಿಸಿ ನಾಗಬನಕ್ಕೆ ಹೋಗಿದ್ದನ್ನು ಯೂತ್ ಕಾಂಗ್ರೆಸ್ ಟೀಕಿಸುತ್ತಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್