Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊದಲ ಬಾರಿಗೆ ಬಿಎಸ್ ಯಡಿಯೂರಪ್ಪ ಅವರನ್ನ ಹೊಗಳಿದ ಶಾಸಕ ಯತ್ನಾಳ್..!

Facebook
Twitter
Telegram
WhatsApp

 

ಬೆಂಗಳೂರು: ವಿಧಾನಸಭೆಯಲ್ಲಿ ವಿದಾಯದ ಭಾಷಣದಲ್ಲಿ ಎಲ್ಲರೂ ರಾಜಕಾರಣ ದ್ವೇಷ ಮರೆತು, ಹೊಗಳಿಕೆಯ ಮಾತುಗಳನ್ನು ಹೇಳುತ್ತಿದ್ದಾರೆ. ಅದರಲ್ಲೂ ತಮ್ಮ ಪಕ್ಷದವರೇ ಆದರೂ ಸದಾ ಆರೋಪ ಮಾಡುತ್ತಿದ್ದ ಶಾಸಕ ಯತ್ನಾಳ್ ಇಂದು ಬಿಎಸ್ ಯಡಿಯೂರಪ್ಪ ಅವರನ್ನು ಹೊಗಳಿದ್ದಾರೆ.

ಸದನದಲ್ಲಿ ಮಾತನಾಡಿದ ಯತ್ನಾಳ್, ನಾನು, ಸ್ಪೀಕರ್, ಆರಗ ಜ್ಞಾನೇಂದ್ರ 94ರ ಬ್ಯಾಚಿನವರು. ಹೆಚ್ಡಿಡಿ, ಖರ್ಗೆ, ವಾಟಾಳ್ ನಾಗರಾಜ್ ಸೇರಿದಂತೆ ಹಲವರು ದೊಡ್ಡವರು. ಬಿಎಸ್ ಯಡಿಯೂರಪ್ಪ ಅವರು ನಮ್ಮನ್ನು ಮುನ್ನಡೆಸುತ್ತಿದ್ದರು. ಸುಮ್ಮನೆ ಕುಳಿತುಕೊಳ್ಳಿ ಎಂದು ನಮ್ಮನ್ನು ಗದರುತ್ತಿದ್ದರು. ಅಭಿವೃದ್ಧಿ ವಿಚಾರದಲ್ಲಿ ಅನ್ಯಾಯವಾದಾಗ ಧ್ವನಿ ಎತ್ತಿದ್ದೇನೆ. ಇಲ್ಲಿಯೂ ಅನ್ಯಾಯವಾದಾಗ ಮಾತನಾಡಲು ಅವಕಾಶ ನೀಡಿದ್ದೀರಿ.

ಬಿಎಸ್ವೈ ಜೊತೆಗೆ ಏನೇ ವೈಷಮ್ಯವಿರಬಹುದು, ಆದರೆ ಅವರು ನಮ್ಮ ನಾಯಕರು. ರಾಜ್ಯದಲ್ಲಿ ಪಕ್ಷ ಕಟ್ಟಿದ್ದು ಬಿಎಸ್ ಯಡಿಯೂರಪ್ಪ ಅವರು, ಅನಂತ್ ಕುಮಾರ್ ಅವರು. ಪಕ್ಷ ಕಟ್ಟಿ ಕೊನೆಯವರೆಗೂ ಉಳಿದವರು ಯಡಿಯೂರಪ್ಪ ಅವರು. ಬಿಎಸ್ವೈ ಅವರೂ ನನ್ನನ್ನು ಮಂತ್ರಿ ಮಾಡಲಿಲ್ಲ. ಅದೇನೆ ಇರಲಿ ಬಿಎಸ್ ಯಡಿಯೂರಪ್ಪ ಅವರು ನನ್ನನ್ನು ಬೆಳೆಸಿದರೂ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!