Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಬಿಐನಿಂದ ಒಂದು ವಾರ ಡಿಕೆಶಿಗೆ ಬಿಗ್ ರಿಲೀಫ್..!

---Advertisement---

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸದ್ಯಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಕೋರ್ಟ್ ನಿಂದ ತಡೆಯಾಜ್ಞೆ ನೀಡಿದ್ದು, ಇನ್ನೂ ಒಂದು ವಾರ ರಿಲೀಫ್ ನೀಡಿದೆ. ಡಿಕೆಶಿ ವಿರುದ್ಧ ಸಿಬಿಐ ನಡೆಸುತ್ತಿದ್ದ ತನಿಖೆಗೆ ಈ ಹಿಂದೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಫೆಬ್ರವರಿ 24ಕ್ಕೆ ಸಿಬಿಐಗೆ ತನಿಖಾ ಪ್ರಗತಿ ವರದಿ ನೀಡುವಂತೆ ಸೂಚನೆ ನೀಡಿತ್ತು. ಈ ಸಂಬಂಧ ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಡಿಕೆಶಿಗೆ ಇನ್ನೂ ಒಂದು ವಾರ ರಿಲೀಫ್ ನೀಡಿದೆ.

ಡಿಕೆ ಶಿವಕುಮಾರ್ ಅವರ ಮೇಲೆ ಅಕ್ರಮ ಆಸ್ತಿ ಕೇಸ್ ವಿಚಾರಣೆ ನಡೆಯುತ್ತಿದ್ದಾಗ, ನಾನೊಬ್ಬ ಕೃಷಿಕ. ಕೃಷಿಯ ಮೂಲದಿಂದಾನೇ ಆಸ್ತಿ‌ ಮಾಡಿರುವುದು ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಬಳಿಕ ಡಿಕೆ ಶಿವಕುಮಾರ್ ಅವರ ಆಸ್ತಿ ಮೌಲ್ಯ, ಬೆಳೆ ಬಗ್ಗೆ, ಪಹಣಿ ಬಗ್ಗೆ ಎಲ್ಲಾ ಸೇರಿ ಕೃಷಿಗೆ ಸಂಬಂಧಿಸಿದಂತೆ ಹಲವು ದಾಖಲೆಗಳನ್ನು ಸಿಬಿಐ ಹೊರ ತೆಗೆಸಿತ್ತು.

ಈ ಕೇಸ್ ಗೆ ಸಂಬಂಧಿಸಿದಂತೆ ಮತ್ತೆ ವಿಚಾರಣೆಗೆ ಬರುವುದಿತ್ತು. ಈ ನಡುವೆ ಕೋರ್ಟ್ ಒಂದು ವಾರಗಳ ಕಾಲ ರಿಲೀಫ್ ನೀಡಿದೆ. ಚುನಾವಣೆ ಬೇರೆ ಹತ್ತಿರವಾಗುತ್ತಿದ್ದು, ಡಿಕೆ ಶಿವಕುಮಾರ್ ಅವರಿಗೆ ಕೇಸ್ ಗಳನ್ನು ಎದುರಿಸಬೇಕಾ..? ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕಾ ತಿಳಿಯದಂತಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...