Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಿಳೆಯರು ಸ್ವಂತ ದುಡಿಮೆಯ ಮೂಲಕ ಸ್ವಾವಲಂಬಿ ಬದುಕು ಕಂಡುಕೊಳ್ಳಬೇಕು :  ಅಶೋಕ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ: ಹೊಲಿಗೆ ತರಬೇತಿ ಪಡೆದುಕೊಂಡಿರುವ ಮಹಿಳೆಯರು ಸ್ವಂತ ದುಡಿಮೆಯ ಮೂಲಕ ಸ್ವಾವಲಂಭಿ ಬದುಕು ಕಂಡುಕೊಳ್ಳುವಂತೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ತಾಲ್ಲೂಕು ಯೋಜನಾಧಿಕಾರಿ ಅಶೋಕ್ ಕರೆ ನೀಡಿದರು.

ತಾಲ್ಲೂಕಿನ ಮೆದೇಹಳ್ಳಿ ವಲಯ ಕಾವಡಿಗರಹಟ್ಟಿ ಕಾರ್ಯ ಕ್ಷೇತ್ರದ ಪ್ರಗತಿ ಜ್ಞಾನಿವಿಕಾಸ ಕೇಂದ್ರದಲ್ಲಿ ನಡೆದ ಹೊಲಿಗೆ ತರಬೇತಿ ಕೇಂದ್ರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಹೊಲಿಗೆ ಮತ್ತು ಕಸೂತಿ ಕೆಲಸಕ್ಕೆ ಸಾಕಷ್ಟು ಬೇಡಿಕೆಯಿರುವುದರಿಂದ ಹೊಲಿಗೆ ತರಬೇತಿ ಪಡೆದ ಸ್ವಸಹಾಯ ಸಂಘದ ಎಲ್ಲಾ ಸದಸ್ಯರು ಮನೆಯಲ್ಲಿಯೇ ಸ್ವ-ಉದ್ಯೋಗ ಮಾಡುವ ಮೂಲಕ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬಹುದು ಎಂದು ಹೇಳಿದರು.

ಪ್ರಾದೇಶಿಕ ವಿಭಾಗದ ಗುಂಪು ಲೆಕ್ಕ ಪರಿಶೋಧನಾ ಯೋಜನಾಧಿಕಾರಿ ರವಿ ಮಾತನಾಡಿ ಜ್ಞಾನವಿಕಾಸ ಕೇಂದ್ರ ಮಾತೃಶ್ರಿ ಹೇಮಾವತಿ ಅಮ್ಮನವರ ಕನಸಾಗಿದ್ದು, ಈ ಕೇಂದ್ರದಲ್ಲಿ ಸೇರಿಕೊಂಡ ಎಲ್ಲಾ ಮಹಿಳೆಯರು ತರಬೇತಿ ಪಡೆದು ವ್ಯವಹಾರದ ಜ್ಞಾನ ವೃದ್ದಿಸಿಕೊಂಡು ಸ್ವಾವಲಂಭಿ ಬದುಕು ಕಟ್ಟಿಕೊಳ್ಳಬಹುದು ಎಂದು ತಿಳಿಸಿದರು.

ಶ್ರೀಮತಿ ಮಂಜುಳ ಮಾತನಾಡುತ್ತ ಗ್ರಾಮೀಣ ಪ್ರದೇಶಗಳ ಮಹಿಳೆಯರ ಅಭಿವೃದ್ದಿಗಾಗಿ ಹೇಮಾವತಿ ಅಮ್ಮನವರು ಜ್ಞಾನವಿಕಾಸ ಕೇಂದ್ರದ ಮೂಲಕ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಸ್ವ-ಉದ್ಯೋಗ ಕೈಗೊಳ್ಳುವ ಸಂಘದ ಸದಸ್ಯರುಗಳಿಗೆ ಪ್ರಗತಿ ನಿಧಿಯನ್ನು ನೀಡುತ್ತಿದ್ದಾರೆ. ಇಪ್ಪತ್ತು ಮಹಿಳೆಯರು ಆಸಕ್ತಿಯಿಂದ ಹೊಲಿಗೆ ತರಬೇತಿಯನ್ನು ಕಲಿತಿದ್ದಾರೆಂದರು.

ಮಮತ, ನಗರಸಭೆ ಸದಸ್ಯ ಜಯಣ್ಣ, ಆಂತರಿಕ ಲೆಕ್ಕಪರಿಶೋಧಕರಾದ ಶ್ರೀಮತಿ ರೇಖಾ, ವಲಯ ಮೇಲ್ವಿಚಾರಕ ಗುರುಬಸವರಾಜ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಸುಧಾ, ಸೇವಾ ಪ್ರತಿನಿಧಿ ಗೀತ, ಶೀಲ ಹಾಗೂ ಕೇಂದ್ರದ ಎಲ್ಲಾ ಸದಸ್ಯರುಗಳು ಸಮಾರೋಪ ಸಮಾರಂಭದಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!