Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಳೆದು ಹೋದ ಮೊಬೈಲ್ ಫೋನ್ ಪತ್ತೆಗೆ ಆಧುನಿಕ ತಂತ್ರಜ್ಞಾನ ಬಳಸಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ಮಾಡಿದ್ದೇನು ?

Facebook
Twitter
Telegram
WhatsApp

ಚಿತ್ರದುರ್ಗ,(ಮಾರ್ಚ್.02) : ಕಳ್ಳತನ ಹಾಗೂ ಕಳೆದುಹೋದ ಮೊಬೈಲ್ ಪತ್ತೆಗೆ ನೆರವಾಗುವ ಸೆಂಟ್ರಲ್ ಏಕ್ಯುಪ್‍ಮೆಂಟ್ ಐಡೆಂಟಿಟಿ ರಿಜಿಸ್ಟರ್ (Central Equipment Identity Register)  ವೈಬ್‍ಸೈಟ್‍ನ್ನು ಕೇಂದ್ರ ಸರ್ಕಾರ ರೂಪಿಸಿದೆ.

ಈ ವೆಬ್‍ಸೈಟ್ ನೆರವಿನಿಂದ ಮೊಬೈಲ್ ಮಾಲೀಕರು ಕಳೆದು ಹೋದ ಮೊಬೈಲ್‍ಪೋನ್‍ಗಳನ್ನು ಬ್ಲಾಕ್ ಮಾಡಬಹುದು.

ಹಿರಿಯೂರು ತಾಲ್ಲೂಕಿನ ಯರಬಳ್ಳಿ ಗ್ರಾಮದ ರಜನಿಕಾಂತ್ ಅವರು ಕಳೆದು ಹೋದ ತಮ್ಮ ಮೊಬೈಲ್ ಫೋನ್ ವಿವರಗಳನ್ನು ಸಿಇಐಆರ್ ಪೋರ್ಟಲ್‍ನಲ್ಲಿ ನಮೂದಿಸಿದ್ದರು.

ರಜನಿಕಾಂತ್ ಅವರ ಮೊಬೈಲ್ ಫೋನ್ ಬೇರೆಯವರು ಉಪಯೋಗಿಸುತ್ತಿರುವುದನ್ನು ವೆಬ್ ಸೈಟ್ ಮೂಲಕ ಐಮಂಗಲ ಪೊಲೀಸ್ ಠಾಣೆಯ ಪಿಎಸ್‍ಐ ಸುರೇಶ್ ಹಾಗೂ ಸಿಬ್ಬಂದಿ ಮೋಹನ್ ಪತ್ತೆಹಚ್ಚಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಅವರು ಪತ್ತೆಯಾದ ಮೊಬೈಲ್ ಪೋನ್‍ನ್ನು ಮಾಲೀಕ ರಜನಿಕಾಂತ್ ಅವರಿಗೆ ಗುರುವಾರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹಸ್ತಾಂತರಿಸಿದರು.

ಮೊಬೈಲ್ ಕಳೆದುಕೊಂಡವರು ಚಿತ್ರದುರ್ಗ ಪೊಲೀಸ್ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಇದುವರಗೆ ಸಿಇಐಆರ್ ಪೋರ್ಟಲ್‍ನಲ್ಲಿ  17 ಪ್ರಕರಣಗಳು ದಾಖಲಾಗಿವೆ. ಸಾರ್ವಜನಿಕರು ಮೊಬೈಲ್ ಕಳ್ಳತನ ಅಥವಾ ಕಳೆದುಹೋದ ಸಂದರ್ಭದಲ್ಲಿ https://ww.ceir.gov.in/ವೆಬ್‍ಸೈಟ್‍ನ ಸದುಪಯೋಗ ಪಡೆದುಕೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಡಿಎಆರ್ ಡಿವೈಎಸ್‍ಪಿ ಎಸ್.ಎಸ್.ಗಣೇಶ, ಎಎಸ್‍ಐ (ಗಣಕಯಂತ್ರ) ರಾಘವೇಂದ್ರ, ಪಿಎಸ್‍ಐ ಗುಡ್ಡಪ್ಪ, ಕಂಪ್ಯೂಟರ್ ಅಪರೇಟರ್ ನಟರಾಜ್ ಸೇರಿದಂತೆ ಮತ್ತಿತರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!