Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಸೇರ್ಪಡೆಯಾದ ಹಾಸ್ಯ ನಟ : ಜವಬ್ದಾರಿ ಏನು ಗೊತ್ತಾ..?

Facebook
Twitter
Telegram
WhatsApp

ಚುನಾವಣೆ ಹತ್ತಿರವಾಗುತ್ತಿದೆ. ಈಗಾಗಲೆ ಹಲವರು ಆ ಪಕ್ಷ ಬಿಟ್ಟು ಈ ಪಕ್ಷ ಈ ಪಕ್ಷ ಬಿಟ್ಟು ಆ ಪಕ್ಷ ಅಂತ ರನ್ನಿಂಗ್ ರೇಸ್ ಮಾಡುತ್ತಿದ್ದಾರೆ. ಇದರ ನಡುವೆ ಪಕ್ಷಕ್ಕೆ ಆಹ್ವಾನ ಮಾಡಿಕೊಳ್ಳುವವರ ಸಂಖ್ಯೆಯೂ ಹೆಚ್ಚಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಇಂದು ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧುಕೋಕಿಲ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಾಧುಕೋಕಿಲ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡಿದ್ದಾರೆ. ಹೂಗುಚ್ಛ ನೀಡಿ, ಶಾಲು ಹೊದಿಸಿ ಸ್ವಾಗತಿಸಿದ್ದಾರೆ. ಇನ್ನು ಕೆಪಿಸಿಸಿಯಲ್ಲಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಸಾಧುಕೋಕಿಲ ಅವರನ್ನು ನೇಮಕ ಮಾಡಲಾಗಿದೆ.

ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಡಿಕೆ ಶಿವಕುನಾರ್, “ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ” ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!