Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಆಗಮನ : ವಾಹನಗಳು ಸಂಚರಿಸುವ ಈ ಮಾರ್ಗದಲ್ಲಿ ಬದಲಾವಣೆ…!

Facebook
Twitter
Telegram
WhatsApp

 

ಚಿತ್ರದುರ್ಗ, (ಮಾ.03): ನಗರದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಆಯೋಜಿಸಿರುವ “ಫಲಾನುಭವಿಗಳ ಸಮಾವೇಶ” ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಾಲ್ಗೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಸರ್ಕಾರದ ಪ್ರಮುಖ ಸಚಿವರು, ಶಾಸಕರುಗಳು ಮತ್ತು ರಾಜಕಾರಣಿಗಳು ಹಾಗೂ ಸಾರ್ವಜನಿಕರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಈ ಸಂಬಂಧ ನಗರದಲ್ಲಿ ಸಂಚಾರ ದಟ್ಟಣೆ ತಡೆಯುವ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಂಬಂಧವಾಗಿ ಮಾರ್ಚ್ 04 ರಂದು ಬೆಳಗ್ಗೆ 08-00 ಗಂಟೆಯಿಂದ ಸಂಜೆ 6-00 ಗಂಟೆವರೆಗೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಮತ್ತು ಖಾಸಗಿ ಬಸ್ಸುಗಳು ಹಾಗೂ ಭಾರಿ ವಾಹನಗಳು ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ
ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ. ಆದೇಶಿಸಿದ್ದಾರೆ.

ವಾಹನಗಳು ಸಂಚರಿಸುವ ಮಾರ್ಗ ಬದಲಾವಣೆ ಈ ಕೆಳಕಂಡಂತಿದೆ.

1. ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಹೊರ ಹೋಗುವ ಎಲ್ಲಾ ಬಸ್‌ಗಳು ನಗರದ ಒಳಗೆ ಬರದಂತೆ ನಗರದ ಜೆ.ಎಂಐಟಿ ಸರ್ಕಲ್‌ ಮುಖಾಂತರ ಹೊರ ಹೋಗುವುದು ಹಾಗೂ ಒಳಬರುವುದು.

2. ಚಳ್ಳಕೆರೆ ಮತ್ತು ಹಿರಿಯೂರು ಕಡೆಯಿಂದ ಬರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಕಡೆಗೆ ಬರುವ ಬಸ್ಸುಗಳನ್ನು ನಗರದ ಒಳಗೆ ಬರದಂತೆ ನಗರದ ಜೆ.ಎಂ.ಐ.ಟಿ, ಸರ್ಕಲ್ ಮುಖಾಂತರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಒಳ ಹೋಗುವುದು ಮತ್ತು ಹೊರ ಬರುವುದು.

3. ಚಳ್ಳಕೆರೆ ಮತ್ತು ಹಿರಿಯೂರು ಕಡೆಯಿಂದ ಬರುವ ಖಾಸಗಿ ಬಸ್‌ ನಿಲ್ದಾಣದ ಕಡೆಗೆ ಬರುವ ಖಾಸಗಿ ಬಸ್ಸುಗಳನ್ನು ನಗರದ ಒಳಗೆ ಬಂದಂತೆ ನಗರದ ಜೆ.ಎಂ.ಐ.ಟಿ ಸರ್ಕಲ್ ಮುಖಾಂತರ ಬಂದು ಆಜಾದ್‌, ಮಿಲ್‌ ಕ್ರಾಸ್ ನಲ್ಲಿ ಎ.ಪಿ.ಎಂ.ಸಿ. ಮಾರುಕಟ್ಟೆ ಒಳಗಿನಿಂದ ಖಾಸಗಿ ಬಸ್ ನಿಲ್ದಾಣದ ಒಳ ಹೋಗುವುದು ಮತ್ತು ಹೊರ ಬರುವುದು.

4. ಹೊಳಲ್ಕೆರೆ, ಶಿವಮೊಗ್ಗ ಕಡೆಯಿಂದ ಬರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ  ಕಡೆಗೆ ಬರುವ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ನಗರದ ಒಳಗೆ ಬರದಂತೆ ನಗರದ ಎಸ್.ಹೆಚ್- 13 ರಸ್ತೆಯಲ್ಲಿ ಮುರುಘಾಮಠದ ಮುಂಭಾಗದಿಂದ ಜೆ.ಎಂ.ಐ.ಟಿ. ಸರ್ಕಲ್ ಮುಖಾಂತರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಒಳ ಹೋಗುವುದು ಮತ್ತು ಹೊರ ಹೋಗುವರು.

5. ಹೊಳಲ್ಕೆರೆ, ಶಿವಮೊಗ್ಗ ಕಡೆಯಿಂದ ಬರುವ ಖಾಸಗಿ ಬಸ್‌ ನಿಲ್ದಾಣದ ಕಡೆಗೆ ಬರುವ ಖಾಸಗಿ ಬಸ್ಸುಗಳು ನಗರದ ಒಳಗೆ ಬರದಂತೆ ನಗರದ ಎಸ್.ಹೆಚ್-13 ರಸ್ತೆಯಲ್ಲಿ ಮುರುಘಾಮಠದ ಮುಂಭಾಗದಿಂದ ಜೆ.ಎಂ.ಐಟಿ ಸರ್ಕಲ್ ಮುಖಾಂತರ ಬಂದು ಆಜಾದ್ ಮಿಲ್ ಕ್ರಾಸ್ ನಲ್ಲಿ ಎ.ಪಿ.ಎಂ.ಸಿ. ಒಳಗಿನಿಂದ ಖಾಸಗಿ ಬಸ್ ನಿಲ್ದಾಣದ ಒಳ ಹೋಗುವುದು ಮತ್ತು ಹೊರ ಹೋಗುವುದು.

6. ಹೊಸಪೇಟೆ ಕಡೆಯಿಂದ ಬರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬರುವ ಕೆ.ಎಸ್.ಆರ್.ಟಿ ಬಸ್ಸುಗಳು ನಗರದ ಒಳಗೆ ಬರದಂತೆ ನಗರದ ಜೆ.ಎಂ.ಐ.ಟಿ ಸರ್ಕಲ್ ಮುಖಾಂತರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಒಳ ಹೋಗುವುದು ಮತ್ತು ಹೊರ ಹೋಗುವುದು.

7. ಹೊಸಪೇಟೆ ಕಡೆಯಿಂದ ಖಾಸಗಿ ಬಸ್‌ ನಿಲ್ದಾಣಕ್ಕೆ ಬರುವ ಖಾಸಗಿ ಬಸ್ಸುಗಳು ನಗರದ ಒಳಗೆ ಬರದಂತೆ ನಗರದ ಜೆ.ಎಂ.ಐ.ಟಿ. ಸರ್ಕಲ್ ಮುಖಾಂತರ ಬಂದು ಆಜಾದ್ ಮಿಲ್ ಕ್ರಾಸ್ ನಲ್ಲಿ ಎ.ಪಿ.ಎಂ.ಸಿ. ಒಳಗಿನಿಂದ ಖಾಸಗಿ ಬಸ್ ನಿಲ್ದಾಣದ ಒಳ ಹೋಗುವುದು ಮತ್ತು ಹೊರ ಹೋಗುವುದು.

8. ಭಾರಿ ವಾಹನಗಳು ನಗರದ ಒಳಗೆ ಪ್ರವೇಶ ಮಾಡದಂತೆ ನಿರ್ಬಂಧಿಸಲಾಗಿದ್ದು, ಬದಲಾದ ಮಾರ್ಗಗಳಲ್ಲಿ ಸಂಚರಿಸಿ ಸಹಕರಿಸಲು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!