Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಿಷನ್ 123 ಪ್ರಕಾರ ಅವಕಾಶ ಕೊಟ್ಟರೆ, ಪಂಚತಂತ್ರ ಯೋಜನೆ‌ ಜಾರಿ: ಹೆಚ್ ಡಿ ದೇವೇಗೌಡ

Facebook
Twitter
Telegram
WhatsApp

ಬೆಂಗಳೂರು: ಮಿಷನ್ 123 ಪ್ರಕಾರ ಅವಕಾಶ ಕೊಟ್ಟರೆ, ಪಂಚತಂತ್ರ ಯೋಜನೆ‌ ಜಾರಿ ಮಾಡಲಾಗುತ್ತದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳಿದರು.

ಈ ವೇಳೆ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ಮಾಡಿದ್ದೆವು,ಆ ವೇಳೆ ಇದನ್ನೆಲ್ಲ‌ ನಿರೀಕ್ಷೆ ಮಾಡಿರಲಿಲ್ಲ.
ಅಧಿಕಾರಕ್ಕೆ ಬಂದರೆ 28 ಸಾವಿರ ಕೋಟಿ ಸಾಲ‌ಮನ್ನಾ ಮಾಡುತ್ತೇನೆ ಎಂದಿದ್ರು ಕುಮಾರಸ್ವಾಮಿ, ಕುಮಾರಸ್ವಾಮಿ ಮಾತು ನನಗೆ ನಂಬಲು‌ ಆಗಿರಲಿಲ್ಲ
ಹೇಗೆ ಸಾಲಮನ್ನಾ ಮಾಡುತ್ತಾನೆ‌‌ ಎಂದು ಅನುಮಾನ ಇತ್ತು
ಹೇಗೆ ಅಷ್ಟೊಂದು ಹಣ ಹೊಂದಿಸುತ್ತಾರೆ ಎಂದು,ಆದರೆ ವಿಧಿಯಾಟವೇ ಬೇರೆ ಇತ್ತು
ನಿಚ್ಚಳ ಬಹುಮತ ಕಳೆದ ಬಾರಿ ಆಗಲಿಲ್ಲ ಎಂದರು.

ಖರ್ಗೆ ಅವರನ್ನು ಸಿಎಂ ಮಾಡಿ ಎಂದು ಸೋನಿಯಾ ಗಾಂಧಿಗೆ ಹೇಳಿದ್ದೇನೆ.ಕಾಂಗ್ರೆಸ್‌ಗೆ ಹೆಚ್ಚು ಸೀಟುಗಳು ಬಂದಿದ್ದವು. ನಾವು ಮುಖ್ಯಮಂತ್ರಿ ಸ್ಥಾನ ಪಡೆದರೆ ಅಭಾಸ ಆಗುತ್ತದೆ. ಹೀಗಾಗಿ ಖರ್ಗೆ ಅವರನ್ನೇ ಸಿಎಂ ಮಾಡಿ ಎಂದಿದ್ದೆ
ಖರ್ಗೆಯವರು ಕೂಡ ಅದಕ್ಕೆ ಒಪ್ಪಿದ್ದರು.ಸೋನಿಯಾ ಗಾಂಧಿಗೆ ಒಪ್ಪಿಸುತ್ತೇನೆ ಎಂದು ಗುಲಾಮ್‌ನಬಿ ಆಜಾದ್ ಹೇಳಿದರು.ಕುಮಾರಸ್ವಾಮಿ ಸಿಎಂ ಆಗಬೇಕೆಂದು ಒಪ್ಪಿಸಿದರು.

ನೂರಾರು ಸೀಟು ಇಟ್ಟುಕೊಂಡಿದ್ದ ಯಡಿಯೂರಪ್ಪ ವಿಪಕ್ಷ ನಾಯಕ ಆದರು, ಸಾಲಮನ್ನಾ ಮಾಡುತ್ತಿರಾ ಇಲ್ವಾ ಎಂದು ಏಕವಚನದಲ್ಲೇ ಮಾತನಾಡಿದ್ದರು,ಯಡಿಯೂರಪ್ಪ ಏಕವಚನದಲ್ಲಿ ಮಾತನಾಡಿದ್ದನ್ನು ಟಿವಿಯಲ್ಲೇ ನೋಡಿದ್ದೆ ಬಜೆಟ್ ವಿಷಯದಲ್ಲಿ ಕೂಡ ಸಿದ್ದರಾಮಯ್ಯ ಷರತ್ತು‌ ಹಾಕಿದ್ದರು. ಸಿದ್ದರಾಮಯ್ಯ ಅವರ ಎಲ್ಲ ಭಾಗ್ಯಗಳನ್ನು ಮುಂದುವರಿಸಲು ಷರತ್ತು ಇತ್ತು
ಸಿದ್ದರಾಮಯ್ಯ ಅವರ 50 ಸಾವಿರ ಸಾಲಮನ್ನಾ ಜೊತೆಗೆ ಕುಮಾರಸ್ವಾಮಿ ಕೂಡ ಸಾಲ‌ಮನ್ನಾ ಮಾಡಿದರು ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!