Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ಯಾರೆಂಟಿ ಕಾರ್ಡ್ ವಿತರಿಸಿ ಆಶಾ ರಘು ಆಚಾರ್ ಕಾಂಗ್ರೆಸ್ ಪರ ಪ್ರಚಾರ

---Advertisement---

 

ಚಿತ್ರದುರ್ಗ,(ಮಾ.05): ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ರಘು ಆಚಾರ್ ಅವರ ಪತ್ನಿ ಆಶಾ ರಘು ಆಚಾರ್ ಇಂದು ನಗರದ 25ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ವಿತರಿಸಿ ಪಕ್ಷದ ಪರ ಪ್ರಚಾರ ನಡೆಸಿದರು.

ಮಾರ್ಚ್ 10 ರಂದು ನಡೆಯಲಿರುವ ತಮ್ಮದೇ ಗೃಹ ಪ್ರವೇಶದ ತರಾತುರಿಯಲ್ಲಿರುವ ರಘು ಆಚಾರ್ ದಂಪತಿ, ಗೃಹ ಪ್ರವೇಶ ಆಮಂತ್ರಣ ಪತ್ರಿಕೆ ಕೊಡುವುದರಲ್ಲಿ ಇಷ್ಟು ದಿನ ಬ್ಯುಸಿಯಾಗಿದ್ರು. ಆದ್ರೆ ಭಾನುವಾರ ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರಕ್ಕಿಳಿದ ರಘು ಆಚಾರ್ ಪತ್ನಿ, ಮಹಿಳೆಯರಿಗೆ ಗ್ಯಾರೆಂಟ್  ಕಾರ್ಡ್ ವಿತರಿ ಅಚ್ಚರಿ ಮೂಡಿಸಿದರು.

ಈ ವೇಳೆ ತಮ್ಮ ಅಳಲನ್ನು ತೋಡಿಕೊಂಡ ಮಹಿಳೆಯರಿಗೆ ಧೈರ್ಯ ತುಂಬುವ ಮಾತುಗಳನ್ನಾಡಿದ ಆಶಾ ರಘು ಆಚಾರ್, ಈ ಬಾರಿ ಎಲ್ಲರೂ ಒಟ್ಟಾಗಿ ಸಹಕರಿಸಿ, ನಾವೆಲ್ಲಾ ಸೇರಿ ಕಾಂಗ್ರೆಸ್ ಪಕ್ಷವನ್ನು ಧಿಕಾರಕ್ಕೆ ತರೋಣ, ಪಕ್ಷ ನೀಡಿರುವ ಗ್ಯಾರೆಂಟಿಯಂತೆ ಪ್ರತೀ ತಿಂಗಳು ಗೃಹಜ್ಯೋತಿ ಯೋಜನೆಯಡಿ ಉಚಿತವಾಗಿ 200 ಯುನಿಟ್ ವಿದ್ಯುತ್, ಮಹಿಳೆಯರಿಗೆ ಪ್ರತೀ ತಿಂಗಳು 2000 ರೂಪಾಯಿ ಸಹಾಯ ಧನ ಪಡೆಯುವ ಜೊತೆಗೆ ಗಗನಕ್ಕೇರಿರುವ ಅಗತ್ಯ ವಸ್ತುಗಳ ಬೆಲೆಯನ್ನು ಕಡಿಮೆ ಮಾಡೋಣ, ನಾನು ನಿಮ್ಮೆಲ್ಲರ ಜೊತೆ ಇರುತ್ತೇನೆ, ಕೊಟ್ಟ ಮಾತಿನಂತೆ ನಿಮಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದರು.

ಪಕ್ಷದ ಪರ ಪ್ರಚಾರದ ನಡುವೆಯೇ ಎಲ್ಲರಿಗೂ ಗೃಹ ಪ್ರವೇಶದ ಆಮಂತ್ರಣ ಪತ್ರಿಕೆಯನ್ನು ನೀಡಿ, ತಪ್ಪದೇ ಎಲ್ಲರೂ ಮಾರ್ಚ್ 10ರಂದು ನಮ್ಮ ಮನೆಯ ಗೃಹ ಪ್ರವೇಶಕ್ಕೆ ಕುಟುಂಬ ಸಮೇತರಾಗಿ ಬಂದು ನಮಗೆ ಆಶೀರ್ವಾದ ಮಾಡಿ ಎಂದು ಕೇಳುವ ಮೂಲಕ ಗಮನ ಸೆಳೆದರು.

ಪಕ್ಷದ ಪರ ಪ್ರಚಾರ ಕಾರ್ಯದಲ್ಲಿ ಡಿಎಸ್ಎಸ್ ಜಯಣ್ಣ ಅವರ ಪುತ್ರ ಪ್ರಸನ್ನ, ಜೆಜೆ ಹಟ್ಟಿ ಯುವಬಳಗದ ಶಶಿಕುಮಾರ್, ಮಲ್ಲಿಕಾರ್ಜುನ್, ಮುಖೇಶ್, ದೇವರಾಜ್, ಮುಬೇದುಲ್ಲಾ ಇತರರು ಭಾಗವಹಿಸಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...