Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಕ್ಷ್ಮೀ ಹೆಬ್ಬಾಳ್ಕರ್ ಫುಲ್ ಭಾಷಣ ಕೇಳಲು ಆಗಿಲ್ಲ : ರಮೇಶ್ ಜಾರಕಿಹೊಳಿ..!

Facebook
Twitter
Telegram
WhatsApp

 

ಬೆಳಗಾವಿ: ಜಿಲ್ಲೆಯಲ್ಲಿ ಸದ್ಯ ಶಿವಾಜಿ ಪ್ರತಿಮೆಯ ವಿಚಾರವೇ ರಾಜಕೀಯದ ಸರಕಾಗಿದೆ. ಇದಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಕಿತ್ತಾಡುತ್ತಿದ್ದಾರೆ. ಮರಾಠಿಗರು ಹೆಚ್ಚಾಗಿರುವ ಹಿನ್ನೆಲೆ ಅವರ ಮನವೊಲೈಕೆ ಮಾಡಿ, ವೋಟ್ ಪಡೆಯಲು ಹೊರಟಿರೋ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ಸದಾ ಕಿತ್ತಾಡಿಕೊಂಡೆ ಇರುತ್ತಾರೆ. ಈಗ ಶಿವಾಜಿ ಪ್ರತಿಮೆಯ ವಿಚಾರಕ್ಕೂ ಅದೇ ಆಗಿದೆ.

ರಾಜಹಂಸಗಢದಲ್ಲಿ ನಿರ್ಮಾಣವಾಗಿದ್ದ ಶಿವಾಜಿ ಪ್ರತಿಮೆ ಇಬ್ಬರ ಪ್ರತಿಷ್ಠೆಗೆ ಕಾರಣವಾಗಿತ್ತು. ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ರಮೇಶ್ ಜಾರಕಿಹೊಳಿ ಒಬ್ಬರು ಪ್ರತಿಮೆ ಅನಾವರಣಕ್ಕೆ ಪಣ ತೊಟ್ಟಿ, ಎರಡು ಬಾರಿ ಉದ್ಘಾಟನೆ ಮಾಡಿದ್ದಾರೆ. ಮಾರ್ಚ್ 5ರಂದು ಸಿಎಂ ಬೊಮ್ಮಾಯಿ ಅವರು ಪ್ರತಿಮೆ ಅನಾವರಣ ಮಾಡಿ ಹೋಗಿದ್ದರೆ, ಮಾರ್ಚ್ 7ರಂದು ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಅನಾವರಣವಾಗಿದೆ.

ಈ ಸಂಬಂಧ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದು, ರಾಜ್ಯದ ಸಿಎಂ ಲೋಕಾರ್ಪಣೆ ಮಾಡಿ ಹೋಗಿದ್ದಾರೆ ತಾನೆ. ಒಬ್ಬ ಶಾಸಕಿಯಾಗಿ ಜವಬ್ದಾರಿ ಇರಬೇಕು. ಮತ್ತೊಮ್ಮೆ ಲೋಕಾರ್ಪಣೆ ಮಾಡುವಂತದ್ದು ಏನಿತ್ತು. ಶಾಸಕಿ ಎಂಬ ಸೊಕ್ಕು ತೋರಿಸಿದರೆ ಜನರೇ ಅದ್ಕೆ ಉತ್ತರ ನೀಡುತ್ತಾರೆ. ಅದು ಸರ್ಕಾರಿ ಸಮಾವೇಶನಾ ಅಥವಾ ಕಾಂಗ್ರೆಸ್ ಸಮಾವೇಶನಾ ಅಂತ ಜನ ನಿರ್ಧಾರ ಮಾಡಬೇಕು ಎಂದಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾಷಣ ಫುಲ್ ಕೇಳಿಲ್ಲ. ಆದ್ರೆ ಒಂದೆರಡು ಮಾತು ಕೇಳಿದ್ದೀನಿ. ಸಿಎಂ ಅವರನ್ನು ತಪ್ಪು ಮಾಹಿತಿ ನೀಡಿ ಶಿವಾಜಿ ಪ್ರತಿಮೆ ಉದ್ಘಾಟನೆಗೆ ಕರೆದುಕೊಂಡು ಬಂದಿದ್ದೀನಿ ಅಂತ ಹೇಳಿದ್ದಾರೆ. ಅಲ್ಲ ಶಾಸಕಿ ಎಷ್ಟು ಮೂರ್ಖರಿರಬೇಕು ಎಂಬುದು ಇದರಿಂದಾನೆ ಅರ್ಥವಾಗುತ್ತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!