Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ಸೃಷ್ಟಿಸಲು ಐಟಿ ಕಂಪನಿಗಳು ಸಹಕಾರಿ : ಸಂಸದ ಜಿ.ಎಂ.ಸಿದ್ದೇಶ್ವರ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ

ದಾವಣಗೆರೆ; (ಫೆ .06) : ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಐ.ಟಿ ಕಂಪನಿಗಳು ಸಹಕಾರಿ ಎಂದು ಲೋಕಸಭಾ ಸಂಸದರಾದ ಜಿ.ಎಂ ಸಿದ್ದೇಶ್ವರ ಅವರು ಹೇಳಿದರು.

ನಗರದ ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಯು. ಕೆ ಇನ್ಫೋಸೈಟ್ ಕನ್ಸಲ್ಟಿಂಗ್ ಗ್ರೂಪ್‍ನ  ಇನ್ನೋವೇಷನ್ ಲ್ಯಾಬ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ  ಐ.ಟಿ ಕಂಪನಿ ಸ್ಥಾಪಿಸಿರುವುದು ಸಂತಸ ತಂದಿದೆ. ಐಟಿ ಕ್ಷೇತ್ರದಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಬೇಕು ಹಾಗೂ ಹೆಚ್ಚಿನ ಎಂ.ಎನ್.ಸಿ ಕಂಪನಿಗಳೂ ಆರಂಭವಾಗಬೇಕು ಎಂದರು.

ಲಂಡನ್ ಇನ್ಫೋಸೈಟ್ ಕನ್ಸಲ್ಟಿಂಗ್ ಸ್ಥಾಪಕ ವೀರೇಶ್ .ಕೆ ಬೆಳ್ಳೂಡಿ ಮಾತನಾಡಿ, ಕಂಪನಿಯು ಲಂಡನ್‍ನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿದ್ದು,  ಜರ್ಮನಿ, ಭಾರತ, ಮಲೇಷಿಯಾ, ಸಿಂಗಾಪುರ್ ಮತ್ತು ಹಾಂಗ್ ಕಾಂಗ್‍ನಲ್ಲಿ 10 ವರ್ಷಗಳಿಂದ ಕಚೇರಿ ಕಾರ್ಯಾಚರಣೆ ನಡೆಸುತ್ತಿವೆ. ಇದೀಗ ಜಿಲ್ಲೆಯಲ್ಲಿ (ಸಾಫ್ಟ್‍ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ) ನಲ್ಲಿ ತನ್ನ ಇನ್ನೋವೇಶನ್ ಲ್ಯಾಬ್  ತೆರೆಯುತ್ತಿದೆ.ಇದು ಜಿಲ್ಲೆಯಲ್ಲಿ ಮೊದಲನೇ ಎಂ.ಎನ್.ಸಿ ಕಂಪನಿಯಾಗಿದೆ ಎಂದರು.

ಕಂಪನಿಯ ವಿಶಾಲ ಉದ್ದೇಶಗಳು ಸ್ಥಳೀಯರಿಗೆ ಉದ್ಯೋಗ ಸೃಷ್ಟಿ ಮಾಡಿ ಸಾಗರೋತ್ತರ ಗ್ರಾಹಕರ ಅಗತ್ಯಗಳನ್ನು ಬೆಂಬಲಿಸುವ ಉದ್ದೇಶ ಹೊಂದಿದೆ. ಇನ್ಫೋಸೈಟ್ ಕನ್ಸಲ್ಟಿಂಗ್ ಎನ್ನುವುದು ಕಂಪನಿಯು ಎಸ್.ಎ.ಪಿ ಅನುಷ್ಠಾನ ರೋಲ್‍ಔಟ್‍ಗಳು, ಅಭಿವೃದ್ಧಿ ಮತ್ತು ಬೆಂಬಲ ಸೇವೆಗಳಲ್ಲಿ ಪರಿಣತಿಯನ್ನು ಹೊಂದಿದ್ದು, ಇದು ಉತ್ಪನ್ನಗಳು ಮತ್ತು ಸೇವೆಗಳೊಂದಿಗೆ ಡಿಜಿಟಲೀಕರಣಕ್ಕೆ  ಸಹಾಯ ಮಾಡುತ್ತದೆ ಎಂದರು.

ಇನ್ನೋವೇಶನ್ ಲ್ಯಾಬ್ ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಎಂ.ಬಿ.ಎ ಪದವೀಧರರು ಹಾಗೂ ಅನುಭವಿ ವೃತ್ತಿಪರರನ್ನು ನೇಮಿಸಿಕೊಂಡು ಸುತ್ತಮುತ್ತಲಿನ ನಗರಗಳಲ್ಲಿ ಸ್ಥಳೀಯವಾಗಿ  ಉದ್ಯೋಗ ಸೃಷ್ಟಿಸುವ ಮೂಲಕ ಮೆಟ್ರೋ ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ಹಾಗೂ ವೈಯಕ್ತಿಕವಾಗಿ  ಅಭಿವೃದ್ಧಿ  ಹೊಂದಲು ಅತ್ಯುತ್ತಮ ಅವಕಾಶಗಳನ್ನು ನೀಡುತ್ತದೆ.  ಇನ್ಫೋಸೈಟ್ ಕನ್ಸಲ್ಟಿಂಗ್ ವಿಶ್ವ ದರ್ಜೆಯ ವೃತ್ತಿಜೀವನ, ಅಂತರರಾಷ್ಟ್ರೀಯ ಯೋಜನೆಗಳ ಅನುಭವ ಮತ್ತು ಅರ್ಹ ವೃತ್ತಿಪರರಿಗೆ ಬಹುಮಾನದ ಪ್ಯಾಕೇಜ್‍ಗಳನ್ನು ನೀಡುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಹರಿಹರ ಮತ್ತು ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಕಾಶ್, ಬಾಪೂಜಿ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ ನಿರ್ದೇಶಕರಾದ ಪ್ರೊ. ವೈ. ವೃಷಭೇಂದ್ರ, ಸಿಂಗಪೂರ್ ಇನ್ಫೋಸೈಟ್ ಕನ್ಸಲ್ಟಿಂಗ್ ಸಿ.ಇ.ಒ ಆಂಥೋನಿ, ಜರ್ಮನಿ ಇನ್ಫೋಸೈಟ್ ಕನ್ಸಲ್ಟಿಂಗ್ ಸಿ.ಇ.ಒ ವಿಶಾಲ್, ಬಿ.ಐ.ಇ.ಟಿ  ಪ್ರೋ. ಶೃತಿ ಮಾಕನೂರ ಇತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...