Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಡಾಳು ವಿರೂಪಾಕ್ಷಪ್ಪ ಅರೆಸ್ಟ್ ಆಗ್ತಾರಾ..? ರಿಲೀಫ್ ಸಿಗುತ್ತಾ..? ಇಂದು ನಿರ್ಧಾರ..!

Facebook
Twitter
Telegram
WhatsApp

ಬೆಂಗಳೂರು: ಮಾಡಾಳು ಪ್ರಶಾಂತ್ ಕಚೇರಿಯಲ್ಲಿ ಲೋಕಾಯುಕ್ತ ದಾಳಿಯಿಂದ ಪತ್ತೆಯಾಗಿದ್ದು ಕೋಟಿ ಕೋಟಿ ಹಣ. ಬಗೆದಷ್ಟು ಮಾಡಾಳು ಭ್ರಷ್ಟಾಚಾರದ ಸಾಮ್ರಾಜ್ಯ ತೆರೆದುಕೊಳ್ಳುತ್ತಾ ಇದೆ. ಸದ್ಯ ಮಾಡಾಳು ಪ್ರಶಾಂತ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಲೋಕಾಯುಕ್ತ ಅಧಿಕಾರಿಗಳಿಂದ ಲುಕ್ ಔಟ್ ನೋಟೀಸ್ ಕೂಡ ಹೊರಡಿಸಲಾಗಿದೆ.

ಮಗನ ಮೋಸದ ಜಾಲ ಪತ್ತೆಯಾದ ಕೂಡಲೇ ಮಾಡಾಳು ವಿರೂಪಾಕ್ಷಪ್ಪ ಎಸ್ಕೇಪ್ ಆಗಿದ್ದರು. ಬಂಧನದ ಭೀತಿಗೆ ಒಳಗಾಗಿದ್ದರು. ಆದ್ರೆ ಇಂದು ಅವರ ಭವಿಷ್ಯ ನಿರ್ಧಾರವಾಗಲಿದೆ. ವಿರೂಪಾಕ್ಷಪ್ಪ ಅವರ ವಕೀಲರು ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಹಾಕಿದ್ದಾರೆ. ತುರ್ತು ವಿಚಾರಣೆ ನಡೆಸುವಂತೆ ಕೋರಿದ್ದಾರೆ.

ಮಾಡಾಳು ಪ್ರಶಾಂತ್ ಹಣ ಪಡೆಯುವಾಗ ವಿರೂಪಾಕ್ಷಪ್ಪ ಆ ಸ್ಥಳದಲ್ಲಿ ಇಲ್ಲದೆ ಇದ್ದ ಕಾರಣವನ್ನೆ ಇಟ್ಟುಕೊಂಡು ವಕೀಲರು ವಾದ‌ ಮಂಡಿಸುವ ಸಾಧ್ಯತೆ ಇದೆ. ಹೈಕೋರ್ಟ್ ನಿಂದ ಇಂದು ಜಾಮೀನು ಸಿಕ್ಕರೆ ವಿರೂಪಾಕ್ಷಪ್ಪ ಅವರಿಗೆ ರಿಲೀಫ್ ಸಿಕ್ಕಂತೆ. ಜಾಮೀನು ತಿರಸ್ಕಾರ ಮಾಡಿದರೆ ಅರೆಸ್ಟ್ ವಾರೆಂಟ್ ಜಾರಿಯಾಗುವ ಸಾಧ್ಯತೆ ಇದೆ. ಯಾಕಂದ್ರೆ ಮಾಡಾಳು ಪ್ರಶಾಂತ್ ಅವ್ಯವಹಾರದಲ್ಲಿ ವಿರೂಪಾಕ್ಷಪ್ಪ ಬೆಂಬಲವೂ ಹೆಚ್ಚಿದೆ ಎಂದು ತಿಳಿದು ಬಂದಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!