Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಂಚ ಕೇಳೋ ಅಧಿಕಾರಿಗಳಿಗೆ ಈ ರೈತನ ರೀತಿ ಬುದ್ಧಿ ಕಲಿಸಬೇಕು ನೋಡಿ..!

Facebook
Twitter
Telegram
WhatsApp

ಹಾವೇರಿ: ಲಂಚ..ಲಂಚ..ಲಂಚ.. ಎಲ್ಲಿ ನೋಡಿದ್ರು, ಯಾವ ಕೆಲಸ ಆಗಬೇಕು ಎಂದರೂ ಇದಿಲ್ಲದೆ ಹೋದರೆ ಏನು ನಡೆಯಲ್ಲ. ಲಂಚ ಕೊಟ್ಟು ಕೊಟ್ಟು ಸುಸ್ತಾಗಿ ಹೋಗಿದ್ದಾರೆ ಜನ. ಗ್ರಾಮ ಪಂಚಾಯ್ತಿಯಿಂದ ಹಿಡಿದು ದೊಡ್ಡ ದೊಡ್ಡ ಕಚೇರಿಗಳಲ್ಲೂ ನೇರವಾಗಿಯೇ ಲಂಚಕ್ಕೆ ಬೇಡಿಕೆ ಇಡುತ್ತಾರೆ. ಆದ್ರೆ ಎಲ್ಲರೂ ಈ ರೈತನಂತೆ ಬುದ್ಧಿವಂತರಾಗಿ, ಧೈರ್ಯವಾಗಿ ನಿಂತರೆ ಲಂಚ ಮುಕ್ತ ಮಾಡುವುದು ತೀರಾ ಕಷ್ಟ ಸಾಧ್ಯವಲ್ಲ.

ಈ ಘಟನೆ ನಡೆದಿರುವುದು ಸಿಎಂ ಬೊಮ್ಮಾಯಿ ಅವರ ತವರು ಜಿಲ್ಲೆಯಲ್ಲಿ. ಯಲ್ಲಪ್ಪ ರಾಣೋಜಿ ಎಂಬ ರೈತ ತನ್ನ ಮನೆಯ ಖಾತೆ ಬದಲಾಯಿಸುವುದಕ್ಕೆ ಜಿಲ್ಲೆಯ ಸವಣೂರಿನ ಪುರಸಭೆಗೆ ಬಂದಿದ್ದಾರೆ. ಅಲ್ಲಿ ಮೊದಲಿದ್ದ ಅಧಿಕಾರಿ ಹಣ ಕೇಳಿದ್ದಾರೆ. ಪಾಪ ಈ ರೈತ ಹಾಗೋ ಹೀಗೋ ಒದಗಿಸಿ ಹಣ ಕೊಟ್ಟಿದ್ದಾರೆ. ಹಣ ತಿಂದವ ಕೆಲಸವನ್ನು ಮಾಡಿಕೊಡದೆ, ಅಲ್ಲಿಂದ ವರ್ಗಾವಣೆಯಾಗಿದ್ದಾರೆ.

ಈಗ ಆ ಜಾಗಕ್ಕೆ ಮತ್ತೊಬ್ಬ ಅಧಿಕಾರಿ ಬಂದಿದ್ದು, ಮತ್ತೆ 25 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದರಿಂದ ಕಂಗೆಟ್ಟ ಯಲ್ಲಪ್ಪ, ತನ್ನಲ್ಲಿದ್ದ ಎತ್ತುಗಳನ್ನು ಕರೆದುಕೊಂಡು ಬಂದು, ಸಾರ್ ನನ್ನ ಬಳಿ ನೀವೂ ಕೇಳಿದಷ್ಟು ಹಣವಿಲ್ಲ. ನಾನು ಹಣ ನೀಡುವ ತನಕ ಈ ಎತ್ತುಗಳನ್ನು ಇಟ್ಟುಕೊಳ್ಳಿ ಎಂದು ಹೇಳಿದ್ದಾರೆ. ರೈತನ ನಡೆಗೆ ಅಧಿಕಾರಿಗಳು ದಂಗಾಗಿದ್ದಾರೆ.

ಇನ್ನು ಈ ವಿಡಿಯೋವನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, 40 ಪರ್ಸೆಂಟ್ ಸರ್ಕಾರ ರೈತರನ್ನು ಬಿಟ್ಟಿಲ್ಲ. ಪೇಸಿಎಂ ಬಸವರಾಜ್ ಬೊಮ್ಮಾಯಿ ಯಾರು ಲಂಚ ಕೊಡುತ್ತಾರೋ ಅವರ ಪರ ಕೆಲಸ ಮಾಡುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!