Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧೃವ ನಾರಾಯಣ ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಠ : ಮಾಜಿ ಸಚಿವ ಹೆಚ್.ಅಂಜನೇಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 87220 22817

ಚಿತ್ರದುರ್ಗ(ಮಾ.11) : ಪಕ್ಷದ ನಾಯಕರಾದ ಧೃವ ನಾರಾಯಣ ರವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಠವಾಗಿದೆ. ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದ ಅವರು ಅವರ ಅದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಕೆ ಮಾಡಿಕೊಳ್ಳಬೇಕಿದೆ ಎಂದು ಮಾಜಿ ಸಚಿವರಾದ ಹೆಚ್.ಅಂಜನೇಯ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಧೃವ ನಾರಾಯಣರವರ ಸಂತಾಪ ಸಭೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಇವರು ಎರಡು ಬಾರಿ ಶಾಸಕರಾಗಿ ಎರಡು ಬಾರಿ ಸಂಸದರಾಗಿ ಉತ್ತಮ ಕೆಲಸವನ್ನು ಮಾಡಿದ್ದಾರೆ, ಇಂದಿಗೂ ಸಹಾ ಅವರ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದಾರೆ.

ಕಳೆದ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದ ಅವರು ಈ ಬಾರಿ ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತಯಾರಿಯನ್ನು ನಡೆಸಿದ್ದರು. ಸಮಾಜ ಸೇವಕರಾಗಿ ಹಲವಾರು ಜನರ ಕಷ್ಟಗಳಿಗೆ ಪರಿಹಾರವನ್ನು ನೀಡಿದ ವ್ಯಕ್ತಿಯಾಗಿದ್ದರು ಎಂದರು.

ನಾನು ಸಮಾಜ ಕಲ್ಯಾಣ ಮಂತ್ರಿಯಾಗಿದ್ದಾಗ ಅವರ ಕ್ಷೇತ್ರಕ್ಕೆ 400 ಕೋಟಿ ರೂಗಳ ವಿವಿಧ ರೀತಿಯ ಕಾಮಗರಿಯನ್ನು ನೀಡಿದೆ. ಅವರ ಮನೆಯವರು ಸಹಾ ತೊಂದರೆಗೆ ಒಳಗಾಗಿದ್ದರೂ ಸಹಾ ಧೃವ ನಾರಾಯಣರವರು ಸಮಾಜ ಮುಖಿಯಾಗಿ ಕೆಲಸವನ್ನು ತಮ್ಮ ಜೀವಿತಾವಧಿ ಕಾಲದಲ್ಲಿ ಮಾಡಿದ್ದಾರೆ.

ತಮ್ಮ ಮನೆಯವರ ನೀವು ರಾಜಕೀಯ ಒತ್ತಡ, ನೋವಿನ ನಡುವೆಯೂ ಸಹಾ ಸ್ನೇಹ ಜೀವಿಯಾಗಿದ್ದ ಅವರು 60 ವರ್ಷ ಸಾಯುವ ವಯಸ್ಸ್ ಅಲ್ಲ, ಇನ್ನೂ ಸಾಧನೆ ಮಾಡುವ ಕಾಲವಾಗಿತ್ತು ಧೃವ ನಾರಾಯಣರವರನ್ನು ಕಳೆದು ಕೊಂಡ ಕಾಂಗ್ರೆಸ್ ಅವರ ಕುಟುಂಬದ ದುಃಖದಲ್ಲಿ ಕಾಂಗ್ರೆಸ್ ಸಹಾ ಭಾಗಿಯಾಗಲಿದೆ ಎಂದರು.

ಜಿಲ್ಲಾಧ್ಯಕ್ಷರಾದ ತಾಜ್‍ಪೀರ್ ಮಾತನಾಡಿ, ಹುಟ್ಟಿ ಆಕಸ್ಮಿಕ ಸಾವು ಖಚಿತ ಯಾರು ಯೋಚಿಸದ ಸಮಯದಲ್ಲಿ ಸಾವು ಸಂಭವಿಸುತ್ತದೆ. ಧೃವ ನಾರಾಯಣ ಸಾವು ಎಲ್ಲರಿಗೂ ಸಹಾ ನಷ್ಠವನ್ನುಂಟು ಮಾಡಿದೆ. ಅವರು ನಡೆದು ಬಂದ ದಾರಿ ನಮೆಗೆಲ್ಲಾ ದಾರಿ ದೀಪವಾಗಬೇಕಿದೆ. ಚಿತ್ರದುರ್ಗಕ್ಕೆ ಅವರ ಸಂಪರ್ಕ ಇದೆ ಆರೋಗ್ಯ ಭಾಗ್ಯ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿಗಳಾಗಿ ಆಗಮಿಸಿದ್ದರು. ಬೇರೆಯವರಿಗೆ ಮಾದರಿಯಾಗಿದ್ದರು. ಸಮಸ್ಯೆ ಎದುರಾದಾಗ ಎಲ್ಲವನ್ನು ಸಹಾ ಧೈರ್ಯದಿಂದ ಎದುರಿಸುತ್ತಿದ್ದರು ಎಂದರು.

ಕಾರ್ಯಕ್ರಮದಲ್ಲಿ ಓ.ಶಂಕರ್, ಬಿ.ಟಿ.ಜಗದೀಶ್, ಹಾಲಸ್ವಾಮಿ, ಸಂಪತ್ ಕುಮಾರ್ ಮೈಲಾರಪ್ಪ, ಪ್ರಚಾರ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ ಚೋಟು ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...