ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಇಂದು ಕೇಂದ್ರ ಚುನಾವಣಾ ಆಯೋಗ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದೆ. ಈ ವೇಳೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಮಾತನಾಡಿ, ಈ ಬಾರಿ 80 ವರ್ಷ ದಾಟಿದ ವೃದ್ಧರು ಹಾಗೂ ಅಂಗವಿಕಲರಿಗೆ ಮನೆಯಿಂದನೇ ಮತದಾನ ಮಾಡುವ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 12.50 ಲಕ್ಷ 80 ವರ್ಷ ಮೇಲ್ಪಟ್ಟ ವೃದ್ಧರಿದ್ದಾರೆ. 100 ವರ್ಷ ಮೇಲ್ಪಟ್ಟವರು 16,976 ಮತದಾರರಿದ್ದಾರೆ. ಇನ್ನು 5.55 ಲಕ್ಷ ಪಿಡಬ್ಲ್ಯುಡಿ ಮತದಾರರಿದ್ದಾರೆ. ಕರ್ನಾಟಕದಲ್ಲೂ ಶಾಂತಿಯುತ ಮತದಾನವಾಗುವ ಭರವಸೆ ಇದೆ. ಹಣ, ಆಮಿಷಗಳಿಗೆ ಮತದಾರರು ಒಳಗಾಗಬೇಡಿ ಎಂದು ಸಲಹೆ ನೀಡಿದ್ದಾರೆ.
ಚುನಾವಣಾ ಅಕ್ರಮ ತಡೆಯಲು ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. ಹದ್ದಿನ ಕಣ್ಣಿಡಲಾಗಿದೆ. ಗಡಿ ಪ್ರದೇಶ, ಕರಾವಳಿ ಭಾಗದಲ್ಲಿ ಹೆಚ್ಚಿನ ಎಚ್ಚರಿಕೆ ತೆಗೆದುಕೊಳ್ಳಲಾಗಿದೆ. ಚುನಾವಣಾ ಅಕ್ರಮಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಅಕ್ರಮ ವರ್ಗಾವಣೆಯ ಮೇಲೂ ನಿಗಾ ಇಡಲಾಗಿದೆ. ಎಲ್ಲಾ ಮತಗಟ್ಟೆಗಳಲ್ಲೂ ಮೂಲಭೂತ ಸೌಕರ್ಯವಿರುವಂತೆ ನೋಡಿಕೊಳ್ಳಲಾಗುವುದು. ಮತಗಟ್ಟೆಗೆ ಬರುವ ಅಂಗವಿಕಲರಿಗೆ ವೀಲ್ ಚೇರ್ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್