Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಸಬ್‍ರಿಜಿಸ್ಟಾರ್ ಕಚೇರಿಯಲ್ಲಿ ಲಂಚಾವತಾರ : ಕಾನೂನು ಕ್ರಮಕ್ಕೆ ಪಿ.ಲೀಲಾಧರ ಠಾಕೂರ್ ಒತ್ತಾಯ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ಇಲ್ಲಿನ ಸಬ್‍ರಿಜಿಸ್ಟಾರ್ ಕಚೇರಿಯಲ್ಲಿ ದೊಡ್ಡ ಮಟ್ಟದಲ್ಲಿ ಲಂಚದ ಹಾವಳಿ, ಭ್ರಷ್ಟಾಚಾರ ನಡೆಯುತ್ತಿದೆ ಎಂದು ನ್ಯಾಯವಾದಿ ಹಾಗೂ ನರೇಂದ್ರಮೋದಿ ಅಭಿಮಾನಿಗಳ ಸಂಘದ ಅಧ್ಯಕ್ಷ ಪಿ.ಲೀಲಾಧರ ಠಾಕೂರ್ ದೂರಿದರು.

ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಬ್‍ರಿಜಿಸ್ಟಾರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಲಕ್ಷ್ಮಿ ತುಳಸಿ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನಲ್ಲಿ ಕೆಲಸ ಮಾಡುವಾಗ ಲಂಚಕ್ಕೆ ಬೇಡಿಕೆಯಿಟ್ಟು ಅಮಾನತ್ತುಗೊಂಡು ಚಿತ್ರದುರ್ಗಕ್ಕೆ ವರ್ಗಾವಣೆಯಾಗಿ ಬಂದಿದ್ದಾರೆ.

ಇಲ್ಲಿಯೂ ಸಹ ತಮ್ಮ ಹಳೆ ಚಾಳಿಯನ್ನು ಬಿಡದೆ ಕಚೇರಿಗೆ ರಿಜಿಸ್ಟ್ರೇಷನ್‍ಗಾಗಿ ಬರುವವರ ಜೀವ ಹಿಂಡುತ್ತಿದ್ದಾರೆ. ಈ ಸಂಬಂಧ ಲೋಕಾಯುಕ್ತ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಕಚೇರಿಗೆ ಬರುವ ಸಾರ್ವಜನಿಕರಿಗೆ ದಿಕ್ಕುತಪ್ಪಿಸಿ ಐದರಿಂದ ಹತ್ತು ಸಾವಿರ ರೂ.ಗಳ ಲಂಚ ಪೀಕುತ್ತಿದ್ದಾರೆ. ಹಣ ನೀಡಿದರೆ ಟೋಕನ್ ಇಲ್ಲದೆ ನೇರವಾಗಿ ನೊಂದಣಿ ಮಾಡಿಸಿಕೊಳ್ಳಬಹುದು. ಇಂತಹ ಭ್ರಷ್ಟ ಅಧಿಕಾರಿಯನ್ನು ಕೂಡಲೆ ಸೇವೆಯಿಂದ ಅಮಾನತ್ತುಪಡಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಪಿ.ಲೀಲಾಧರ ಠಾಕೂರ್ ಒತ್ತಾಯಿಸಿದರು.

ನೊಂದಣಿಗಾಗಿ ಹಾಜರುಪಡಿಸಿದ ಕ್ರಯಪತ್ರ, ಪಾಲು ವಿಭಾಗ ಪತ್ರ, ದಾನಪತ್ರ, ಹಕ್ಕು ಬಿಡುಗಡೆ ಪತ್ರ, ಬ್ಯಾಂಕಿಗೆ ಅಡಮಾನ ಮಾಡುವ ಪತ್ರಗಳ ನೊಂದಣಿಗಾಗಿ ಇಲ್ಲಿ ಲಂಚ ಕೊಡಲೇಬೇಕು. ಮಾರುಕಟ್ಟೆ ಬೆಲೆಯ ಪ್ರತಿ ಒಂದು ಲಕ್ಷ ರೂ.ಗಳಿಗೆ ಒಂದು ಸಾವಿರ ರೂ.ಗಳನ್ನು ಫಿಕ್ಸ್ ಮಾಡಲಾಗಿದೆ. ಇಲ್ಲವಾದರೆ ನೊಂದಣಿಯಾಗುವುದಿಲ್ಲ. ನ್ಯಾಯಾಧೀಶರೊಬ್ಬರ ಗನ್‍ಮ್ಯಾನ್‍ಗೂ ಇಲ್ಲಿನ ಲಂಚದ ಬಿಸಿ ತಾಕಿದೆ ಎಂದರು.

ನಗರಸಭೆ ಮಾಜಿ ಸದಸ್ಯ ಬಿ.ಎಲ್.ರವಿಶಂಕರ್ ಬಾಬು ಮಾತನಾಡಿ ಚಿತ್ರದುರ್ಗ ಸಬ್‍ರಿಜಿಸ್ಟರ್ ಕಚೇರಿಯಲ್ಲಿ ಭ್ರಷ್ಠಾಚಾರ ಮಿತಿ ಮೀರಿದೆ. ಆಸ್ತಿಗಳ ಮಾರಾಟ ಹಾಗೂ ನೊಂದಣಗೆ ಬರುವವರಿಂದ ಮನಸೋ ಇಚ್ಚೆ ಲಂಚದ ಹಣಕ್ಕೆ ಬೇಡಿಕೆಯಿಡುತ್ತಿರುವುದು ಯಾವ ನ್ಯಾಯ. ಕೇಳಿದಷ್ಟು ಲಂಚ ಕೊಡದಿದ್ದರೆ ಯಾವ ನೊಂದಣಿಯೂ ಆಗುವುದಿಲ್ಲ. ಸ್ಥಳೀಯ ಶಾಸಕರು ಇತ್ತ ಗಮನಹರಿಸಿ ಇಲ್ಲಿ ನಡೆಯುತ್ತಿರುವ ಹಗರಣಗಳನ್ನು ನಿಯಂತ್ರಿಸಬೇಕಿದೆ ಎಂದು ಮನವಿ ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

error: Content is protected !!