Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಚಿಕೆಗೇಡಿನ ಸಂಗತಿ ಎಂದ ಜೆಡಿಎಸ್.. ಪ್ರಧಾನಿ ಹುದ್ದೆಗೆ ಕಳಂಕವೆಂದ ಕಾಂಗ್ರೆಸ್ : ಅಷ್ಟಕ್ಕೂ ಮೋದಿಯ ಯಾವ ವಿಚಾರಕ್ಕೆ ಇವ್ರೆಲ್ಲ ಹಿಂಗಂದ್ರು..?

Facebook
Twitter
Telegram
WhatsApp

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಿನ್ನೆ ರಾಜ್ಯಕ್ಕೆ ಭೇಟಿ ನೀಡಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯವರಿಗೆ ಸಿಎಂ ಬೊಮ್ಮಾಯಿ ಸೇರಿದಂತೆ ರಾಜ್ಯದ ಹಲವು ಪ್ರಮುಖ ನಾಯಕರು ಸ್ವಾಗತ ಕೋರಿದ್ದಾರೆ. ಅದರ ಜೊತೆಗೆ ರೌಡಿಶೀಟರ್ ಸಾಲಿನಲ್ಲಿರುವ ಫೈಟರ್ ರವಿಗೆ ಪ್ರಧಾನಿ ಮೋದಿಯವರು ಕೈ ಮುಗಿದಿರುವ ಫೋಟೋ ಒಂದು ವೈರಲ್ ಆಗಿದೆ.

ಈ ಫೋಟೋ ಪೋಸ್ಟ್ ಮಾಡಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ. ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ @narendramodi ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು ಎಂದು ಕಿಡಿಕಾರಿದೆ.

ಇಂದು ಮಾಜಿ ಸಿಎಂ ಕುಮಾರಸ್ವಾಮಿ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುವವರಿಗೆ ಮತ್ತು ಅಂಡರ್ ವರ್ಲ್ಡ್ ಡಾನ್ ಕೆಲಸ ಮಾಡುವವರಿಗೆ ತಲೆಬಾಗಿ ಕೈ ಮುಗಿದಿದ್ದಾರೆ. ಇದಿ ನಾಚಿಕೆಗೇಡಿನ ಕೆಲಸ. ಈ ದೃಶ್ಯ ನೋಡ್ತಾ ಇದ್ರೆ ಕರ್ನಾಟಕದಲ್ಲಿ ಬಿಜೆಪಿ ಯಾವ ರೀತಿಯ ದಯನೀಯ ಸ್ಥಿತಿ ತಲುಪಿದೆ ಎಂದು ಗೊತ್ತಾಗಲಿದೆ ಎಂದು ವ್ಯಂಗ್ಯವಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

error: Content is protected !!