Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಚಿಕೆಗೇಡಿನ ಸಂಗತಿ ಎಂದ ಜೆಡಿಎಸ್.. ಪ್ರಧಾನಿ ಹುದ್ದೆಗೆ ಕಳಂಕವೆಂದ ಕಾಂಗ್ರೆಸ್ : ಅಷ್ಟಕ್ಕೂ ಮೋದಿಯ ಯಾವ ವಿಚಾರಕ್ಕೆ ಇವ್ರೆಲ್ಲ ಹಿಂಗಂದ್ರು..?

---Advertisement---

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಿನ್ನೆ ರಾಜ್ಯಕ್ಕೆ ಭೇಟಿ ನೀಡಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯವರಿಗೆ ಸಿಎಂ ಬೊಮ್ಮಾಯಿ ಸೇರಿದಂತೆ ರಾಜ್ಯದ ಹಲವು ಪ್ರಮುಖ ನಾಯಕರು ಸ್ವಾಗತ ಕೋರಿದ್ದಾರೆ. ಅದರ ಜೊತೆಗೆ ರೌಡಿಶೀಟರ್ ಸಾಲಿನಲ್ಲಿರುವ ಫೈಟರ್ ರವಿಗೆ ಪ್ರಧಾನಿ ಮೋದಿಯವರು ಕೈ ಮುಗಿದಿರುವ ಫೋಟೋ ಒಂದು ವೈರಲ್ ಆಗಿದೆ.

ಈ ಫೋಟೋ ಪೋಸ್ಟ್ ಮಾಡಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ. ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ @narendramodi ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು ಎಂದು ಕಿಡಿಕಾರಿದೆ.

ಇಂದು ಮಾಜಿ ಸಿಎಂ ಕುಮಾರಸ್ವಾಮಿ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುವವರಿಗೆ ಮತ್ತು ಅಂಡರ್ ವರ್ಲ್ಡ್ ಡಾನ್ ಕೆಲಸ ಮಾಡುವವರಿಗೆ ತಲೆಬಾಗಿ ಕೈ ಮುಗಿದಿದ್ದಾರೆ. ಇದಿ ನಾಚಿಕೆಗೇಡಿನ ಕೆಲಸ. ಈ ದೃಶ್ಯ ನೋಡ್ತಾ ಇದ್ರೆ ಕರ್ನಾಟಕದಲ್ಲಿ ಬಿಜೆಪಿ ಯಾವ ರೀತಿಯ ದಯನೀಯ ಸ್ಥಿತಿ ತಲುಪಿದೆ ಎಂದು ಗೊತ್ತಾಗಲಿದೆ ಎಂದು ವ್ಯಂಗ್ಯವಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...