Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುಬ್ಬಿ ಶ್ರೀನಿವಾಸ್ ಮತ್ತೆ ಜೆಡಿಎಸ್ ಗೆ ಬರೋದು ಅಷ್ಟು ಸುಲಭವಾ..? : ಕುಮಾರಸ್ವಾಮಿ ಮತ್ತೆ ಹೇಳಿದ್ದೇನು..?

Facebook
Twitter
Telegram
WhatsApp

ಹಾಸನ: ಗುಬ್ಬಿ ಶ್ರೀನಿವಾಸ್ ಸದ್ಯ ಜೆಡಿಎಸ್ ನಿಂದ ಸಾಕಷ್ಟು ಅಂತರ ಕಾಯ್ದುಕೊಂಡಿದ್ದಾರೆ. ಅವರಿಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂಬಂತೆ ಕುಮಾರಸ್ವಾಮಿ ವಿಚಾರ ಬಂದಾಗೆಲ್ಲಾ ಹೇಳಿದ್ದಾರೆ. ಆದ್ರೆ ಇತ್ತಿಚೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಗುಬ್ಬಿ ಶ್ರೀನಿವಾಸ್ ಗೆ ಮತ್ತೆ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ಇದೇ ವಿಚಾರಕ್ಕೆ ಈಗ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ.

ಜಿಲ್ಲೆಯ ಚನ್ನರಾಯಪಟ್ಟಣದ ವಡ್ಡರಹಳ್ಳಿಯಲ್ಲಿ ಮಾತನಾಡಿದ ಅವರು, ಗುಬ್ಬಿ ಕ್ಷೇತ್ರದಲ್ಲಿ ಕುಮಾರಸ್ವಾಮಿಯೇ ಅಲ್ಟಿಮೇಟ್ ಎಂದು ಯಾರಾದರು ಹೇಳಿದ್ದರೇ ಬಾಯಿ ತಪ್ಪಿ ಹೇಳಿರುತ್ತಾರೆ. ನನ್ನ ಅರಿವಿಲ್ಲದೆ ನಾನು ಯಾರಿಗೂ ಪವರ್ ಕೊಟ್ಟಿಲ್ಲ. ನಾನು ಈಗಾಗಲೇ ನಮ್ಮ ಅಭ್ಯರ್ಥಿ ಒಂದೂವರೆ ವರ್ಷದಿಂದ ಕೆಲಸ‌ ಮಾಡುತ್ತಿದ್ದಾರೆ. ನಾಗರಾಜು ಎಂದು ಘೋಷಣೆಯಾಗಿದೆ. ಇಲ್ಲಿ ಯಾರೂ ಬೇರೆ ರೀತಿಯ ಹೇಳಿಕೆಗಳನ್ನು ನೀಡಿ ಕಾರ್ಯಕರ್ತರಿಗೆ ಗೊಂದಲ ಮೂಡಿಸುವುದು ಬೇಡ ಎಂದಿದ್ದಾರೆ.

ಈ ರೀತಿಯ ಹುಡುಗಾಟದ ಹೇಳಿಕೆಗಳನ್ನು ಕೊಡುವುದಲ್ಲ. ಆ ವ್ಯಕ್ತಿ ಪಕ್ಷದಿಂದ ದೂರ ಹೋಗಿ ಎರಡು ವರ್ಷಗಳೇ ಕಳೆದಿದೆ. ಆ ವ್ಯಕ್ತಿಯನ್ನು ಮತ್ತೆ ಪಕ್ಷಕ್ಕೆ ಬಾ ಅಂತ ಕರೆಯೋದಕ್ಕೆ ಅರ್ಜಿ ಹಾಕಿದ್ದೇವಾ..? ಇಲ್ಲಿ ಯಾವುದೇ ಗೊಂದಲವಿಲ್ಲ. ಗುಬ್ಬಿದಾಗಲಿ, ಮತ್ತೊಂದಾಗಲೀ, ಯಾವ ನಾಯಕರು ಗೊಂದಲ ಮಾಡಬಾರದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!