Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲೂ ‘ಕಬ್ಜ’ ಹವಾ : ಸಿನಿಮಾ ಜೋಶು ಜೋರು…!

Facebook
Twitter
Telegram
WhatsApp

ಸುದ್ದಿಒನ್ ಡೆಸ್ಕ್

ಚಿತ್ರದುರ್ಗ, (ಮಾ.17) : ಇಂದು ಕಬ್ಜ ಸಂಭ್ರಮ.. ಕಬ್ಜ ಸಿನಿಮಾ ನೋಡುವ ಕುತೂಹಲಕ್ಕಿಂದು ತೆರೆ ಬೀಳುತ್ತಿದೆ. ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗಾಗಿ ಈ ಸಿನಿಮಾ ಅರ್ಪಣೆ ಮಾಡಲಾಗಿದೆ. ಹೀಗಾಗಿ ಇಂದು ಅಪ್ಪು ಅವರ ಹುಟ್ಟಿದ ಹಬ್ಬದ ದಿನಕ್ಕೆಂದೆ‌ಏ ಸಿನಿಮಾ ರಿಲೀಸ್ ಮಾಡಲಾಗಿದೆ. ಎಲ್ಲೆಡೆ ಕಬ್ಜ ಸಿನಿಮಾದ ಜೋಶ್ ನಲ್ಲಿದ್ದಾರೆ ಜನ. ಕೋಡೆನಾಡು ಚಿತ್ರದುರ್ಗದಲ್ಲೂ ಬೆಳಗ್ಗೇನೆ ಥಿಯೇಟರ್ ಮುಂದೆ ಸಾಲು ಗಟ್ಟಿ ನಿಂತ ದೃಶ್ಯ ಕಂಡು ಬಂದಿದೆ.

ನಗರದ ಬಸವೇಶ್ವರ ಚಿತ್ರಮಂದಿರದಲ್ಲಿ ಕಬ್ಜ ಸಿನಿಮಾ ತೆರೆ ಕಂಡಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಮೊದಲ ಶೋ ಆರಂಭವಾಗಿದೆ. ಈ ಮೊದಲ ಶೋ ನೋಡಲು ಪ್ರೇಕ್ಷಕರು ಬೆಳಗ್ಗೇನೆ ಬಂದಿದ್ದಾರೆ. ಇನ್ನು ಕಬ್ಜ ಸಿನಿಮಾದ ಕಟೌಟ್ ಗೆ ಕ್ಷೀರಾಭಿಷೇಕ ಮಾಡಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಈ ಸಿನಿಮಾವು ಶತದಿನೋತ್ಸವ ಆಚರಿಸಲೆಂದು ಶುಭ ಹಾರೈಸಿದರು.

ಚಿತ್ರಮಂದಿರದ ಆವರಣದಲ್ಲಿ ಉಪೇಂದ್ರ ಅವರ ಅಭಿಮಾನಿಗಳು ದೊಡ್ಡ ದೊಡ್ಡ ಕಟೌಟ್ ಗಳನ್ನು ಹಾಕಿದ್ದರು. ತಮ್ಮ‌ ನೆಚ್ಚಿನ ನಟನಿಗೆ ಜೈಕಾರ ಹಾಕುತ್ತಾ ಎಂಜಾಯ್ ಮಾಡಿದ್ದಾರೆ. ಥಿಯೇಟರ್ ಮುಂದೆ ಕುಣಿದು ಕುಪ್ಪಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿ ಸೈಬರ್ ವಂಚನೆ ಪ್ರಕರಣ : ವಂಚಕರ ಜಾಲ ಭೇದಿಸಿದ ಸಿಇಎನ್ ಪೊಲೀಸರು

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.08 : ನಗರದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿಯವರಿಗೆ ಕಳೆದ ತಿಂಗಳು ನಡೆದಿದ್ದ ಸೈಬರ್ ವಂಚನೆ ಪ್ರಕರಣವನ್ನು ಚಿತ್ರದುರ್ಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಭೇದಿಸಿದ್ದಾರೆ. ನಗರದ ಹಿರಿಯ

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

error: Content is protected !!