Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಎಲ್ಲೆಲ್ಲಿ ನಡೆಯಲಿದೆ ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮಾ.17) : ಹೊಳಲ್ಕೆರೆ ತಾಲ್ಲೂಕು ಹೊರತುಪಡಿಸಿ ಉಳಿದ ತಾಲ್ಲೂಕಿನ ತಹಶೀಲ್ದಾರ್‍ರರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮಾರ್ಚ್ 18ರಂದು ಜಿಲ್ಲಾಧಿಕಾರಿಗಳ ನಡೆ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಬೆಟ್ಟದ ನಾಗೇನಹಳ್ಳಿ, ಹಿರಿಯೂರಿನ ಕೆ.ಆರ್.ಹಳ್ಳಿ, ಹೊಸದುರ್ಗದ ಜಿನ್ನಾಪುರ, ಚಳ್ಳಕೆರೆಯ ಸೋಮಗುದ್ದು ಹಾಗೂ ಮೊಳಕಾಲ್ಮುರು ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರ್ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಂಡು ಸಾರ್ವಜನಿಕರ ಅಹವಾಲು ಸ್ವೀಕರಿಸುವರು.

ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಮಾರ್ಚ್ 18 ರಂದು ಹೊಳಲ್ಕೆರೆ ತಾಲ್ಲೂಕಿನ ತಿರುಮಲಾಪುರ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಹಮ್ಮಿಕೊಳ್ಳಲಾಗಿತ್ತು. ಆದರೆ ಮಾರ್ಚ್ 19ರಂದು ಮುಖ್ಯಮಂತ್ರಿಗಳು ಹೊಳಲ್ಕೆರೆ ಪಟ್ಟಣದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಆಗಮಿಸುತ್ತಿರುವುದರಿಂದ ಮಾರ್ಚ್ 18ರಂದು ಹಮ್ಮಿಕೊಳ್ಳಲಾಗಿದ್ದ ಗ್ರಾಮ ವಾಸ್ತವ್ಯ ಮುಂದೂಡಲಾಗಿದೆ. ಉಳಿದಂತೆ ಹೊಳಲ್ಕೆರೆ ತಾಲ್ಲೂಕು ಹೊರತುಪಡಿಸಿ, ಉಳಿದ ಐದು ತಾಲ್ಲೂಕುಗಳಲ್ಲಿ ನಿಗದಿಪಡಿಸಿರುವಂತೆ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಅಭಿಯಾನ ನಡೆಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...