ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಲೇ ಪಕ್ಷಾಂತರ ಪರ್ವ ಶುರುವಾಗುತ್ತಿದೆ. ಆ ಪಕ್ಷದವರು ಈ ಪಕ್ಷಕ್ಕೆ ಈ ಪಕ್ಷದವರು ಆ ಪಕ್ಷಕ್ಕೆ ಹೋಗುವುದು ಸಾಮಾನ್ಯ. ಜೊತೆಗೆ ಪಕ್ಷದಿಂದಾಚೆಗೆ ಭೇಟಿಗಳು ನಡೆಯುತ್ತಿರುತ್ತೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಭೇಟಿಯಾಗಿದ್ದಾರೆ. ಈ ಭೇಟಿ ಬಳಿಕ ಸಾಕಷ್ಟು ಚರ್ಚೆಗಳು ಶುರುವಾಗಿದೆ.
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ರಹಸ್ಯದ ಮಾತುಕತೆ ಕುತೂಹಲ ಕೆರಳಿಸಿದೆ. ಅರವಿಂದ್ ಬೆಲ್ಲದ್ ಹುಬ್ಬಳ್ಳಿ ಮತ್ತು ಧಾರವಾಡದ ಭಾಗದ ನಾಯಕ. ಈಗ ಡಿಕೆ ಶಿವಕುಮಾರ್ ಜೊತೆಗೆ ಭೇಟಿ ಮಾಡಿ, ಹುಬ್ಬಳ್ಳಿ – ಧಾರಾವಾಡದ ರಾಜಕೀಯ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ನಿಂದ ಆ ಭಾಗದಲ್ಲಿ ಪ್ರಬಲ ಅಭ್ಯರ್ಥಿ ಕಣಕ್ಕಿಳಿದರೆ ತನಗೆ ತೊಂದರೆಯಾಗುತ್ತೆ ಎಂದು ಅರವಿಂದ್ ಬೆಲ್ಲದ್ ತಿಳಿಸಿದ್ದಾರಂತೆ. ಯಾಕಂದ್ರೆ ಕಾಂಗ್ರೆಸ್ ನಿಂದ ಮೋಹನ್ ಲಿಂಬಿಕಾಯಿ ಅವರನ್ನು ಕಣಕ್ಕಿಳಿಸುವ ಪ್ಲ್ಯಾನ್ ನಡೆದಿದೆ ಎನ್ನಲಾಗಿದೆ.
ಮೋಹನ್ ಲಿಂಬಿಕಾಯಿ ಇತ್ತಿಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಹುಬ್ಬಳ್ಳಿ – ಧಾರವಾಡ ಭಾಗದಲ್ಲು ಬಿಜೆಪಿ ಸೋಲಿಸುವ ಪಣ ತೊಟ್ಟಿರುವ ಕಾಂಗ್ರೆಸ್ ಮೋಹನ್ ಅವರನ್ನೇ ನಿಲ್ಲಿಸಲು ಯೋಜನೆ ರೂಪಿಸಿದೆ. ಮೋಹನ್ ಅವರು ಸ್ಪರ್ಧ ಮಾಡಿದರೆ, ಅರವಿಂದ್ ಬೆಲ್ಲದ್ ಗೆಲುವು ಕಷ್ಟವಾಗುತ್ತದೆ. ಹೀಗಾಗಿ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಬೆಲ್ಲದ್, ಡಿಕೆಶಿ ಬಳಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್