Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾರದರ್ಶಕ ರೀತಿಯಲ್ಲಿ ನಾಗರೀಕ ಕಾನ್ಸ್ಟೇಬಲ್ಸ್ ಹಾಗೂ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿ:ಆರಗ ಜ್ಞಾನೇಂದ್ರ

Facebook
Twitter
Telegram
WhatsApp

ಬೆಂಗಳೂರು; ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ನಡೆಯುತ್ತಿರುವ ನಾಗರೀಕ ಕಾನ್ಸ್ಟೇಬಲ್ಸ್ ಹಾಗೂ ಸಬ್ ಇನ್ಸ್ಪೆಕ್ಟರ್ಗಳ ನೇಮಕಾತಿಗಳನ್ನು ಅತ್ಯಂತ ಪಾರದರ್ಶಕ ಹಾಗೂ ನಿಯಮಾನುಗಳನುಸಾರ ನಡೆಸುತ್ತಿದ್ದು, ಅಭ್ಯರ್ಥಿಗಳು ಹಾಗೂ ಅವರುಗಳ ಪೋಷಕರು

ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ವಿನಂತಿಸಿದ್ದಾರೆ.

ನೇಮಕಾತಿಯಲ್ಲಿ ಕೆಲಸ ಕೊಡಿಸುತ್ತೇನೆಂದು ಕೆಲವರು ನಂಬಿಕೆ ಹುಟ್ಟಿಸಿ, ಅಭ್ಯರ್ಥಿಗಳನ್ನು ವಂಚಿಸುತ್ತಿರುವ ಕೆಲವು ಘಟನೆಗಳು
ವರದಿಯಾಗಿದ್ದು, ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಅಂತಹ ಯಾವುದೇ ಆಮಿಷಗಳಿಗೆ ಬೆಲೆ ಕೊಡಬಾರದು ಎಂದರು.

ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ 947 ಸಬ್ ಇನ್ಸ್ಪೆಕ್ಟರ್ಸ್ ಹಾಗೂ 4000 ನಾಗರೀಕ ಕಾನ್ಸ್ಟೇಬಲ್ಸ್ ಹುದ್ದೆಗಳ ನೇಮಕಾತಿ
ನಡೆಯುತ್ತಿದ್ದು, ನೇಮಕಾತಿ ಪ್ರಕ್ರಿಯೆಯಗಳ ಭಾಗವಾಗಿ ನಡೆಯುತ್ತಿರುವ ದೈಹಿಕ ಸಾಮರ್ಥ್ಯತೆ ಹಾಗೂ ಲಿಖಿತ ಪರೀಕ್ಷೆಗಳು, ಅತ್ಯಂತ ಪಾರದರ್ಶಕವಾಗಿದ್ದು
ಇದರಲ್ಲಿ ದಾಖಲಾಗುವ ಫಲಿತಾಂಶಗಳೇ ಅಭ್ಯರ್ಥಿಗಳ ಆಯ್ಕೆಯ ಮಾನದಂಡ ಗಳಾಗಿರುತ್ತವೆ.

ಹುದ್ದೆ ಕೊಡಿಸುವುದಾಗಿ ಯಾರದರೂ ಆಮಿಷ ಒಡ್ಡಿದರೆ, ಅಭ್ಯರ್ಥಿಗಳು ಅಥವಾ ಅವರ ಪೋಷಕರು, ವಿಷಯವನ್ನು ಪೊಲೀಸರಿಗೆ ತಿಳಿಸಬೇಕು, ಮತ್ತು
ವಂಚನೆಗೆ ಒಳಗಾಗುವುದರಿಂದ ತಪ್ಪಿಸಿಕೊಳ್ಳಬೇಕು, ಎಂದೂ ಸಚಿವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ..!

ಸುದ್ದಿಒನ್, ಚಿತ್ರದುರ್ಗ, ಜೂ.15 :  ಲಾರಿಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 48 (4) ರಲ್ಲಿ ನಡೆದಿದೆ. ತಾಲ್ಲೂಕಿನ ಭರಮಸಾಗರದ ಚಿಕ್ಕಬೆನ್ನೂರು ಬಳಿ ಈ

ಈ ರಾಶಿಯ ರಸಗೊಬ್ಬರ, ಬೀಜೋತ್ಪಾದನೆ, ಹಾಗೂ ಸರಬರಾಜು ವಹಿವಾಟಗಾರರಿಗೆ ಉತ್ತಮ ಧನ ಲಾಭ

ಈ ರಾಶಿಯ ರಸಗೊಬ್ಬರ, ಬೀಜೋತ್ಪಾದನೆ, ಹಾಗೂ ಸರಬರಾಜು ವಹಿವಾಟಗಾರರಿಗೆ ಉತ್ತಮ ಧನ ಲಾಭ, ಈ ಪಂಚ ರಾಶಿಗಳ ಮದುವೆ ವಿಳಂಬವಾಗಲು ಸಮಸ್ಯೆ ಕಾಡುತ್ತಿದೆ, ಶನಿವಾರ- ರಾಶಿ ಭವಿಷ್ಯ ಜೂನ್-15,2024 ಮಿಥುನ ಸಂಕ್ರಾಂತಿ ಸೂರ್ಯೋದಯ: 05:45,

ರೇಣುಕಾಸ್ವಾಮಿ ಕೊಲೆ ಪ್ರಕರಣ | ಚಿತ್ರದುರ್ಗದಲ್ಲಿ ಅನಿಲ್ ಸೆರಂಡರ್ ಆದ ಬೆನ್ನಲ್ಲೇ ಹೃದಯಾಘಾತದಿಂದ ತಂದೆ ಸಾವು..!

ಸುದ್ದಿಒನ್, ಚಿತ್ರದುರ್ಗ, ಜೂ. 14 : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಆರೋಪಿಗಳನ್ನು ಬಂಧಿಸಿದ್ದಾರೆ. ಒಬ್ಬೊಬ್ಬರಾಗಿಯೇ ಬಂದು ಪೊಲೀಸರಿಗೆ ಶರಣಾಗುತ್ತಿದ್ದಾರೆ. ಇಂದು ಕೂಡ ಇಬ್ಬರು ಅರೆಸ್ಟ್ ಆಗಿದ್ದಾರೆ. ಅದರಲ್ಲಿ ಆಟೋ ಕೆಲಸ

error: Content is protected !!