ನಟ ಚೇತನ್ ಅಹಿಂಸಾ ಬಂಧನ : ಶೇಷಾದ್ರಿಪುರಂ ಪೊಲೀಸರಿಂದ ಅರೆಸ್ಟ್..!

0 Min Read

 

ಬೆಂಗಳೂರು: ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಹಿಂಸಾ ಅವರನ್ನು ಬಂಧಿಸಲಾಗಿದೆ. ಶೇಷಾದ್ರಿಪುರಂ ಪೊಲೀಸರು ಅರೆಸ್ಟ್ ಮಾಡಿ ಕರೆದುಕೊಂಡು ಹೋಗಲಾಗಿದೆ. ಇಂದು ಚೇತನ್ ಅಹಿಂಸಾ ಬಂಧನವಾಗಿದೆ.

ಚೇತನ್ ಅಹಿಂಸಾ ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್ಗಳನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದರು. ಇದನ್ನು ಹಿಂದೂ ಸಂಘಟನೆಗಳು ವಿರೋಧಿಸಿವೆ. ಜೊತೆಗೆ ಚೇತನ್ ಅಹಿಂಸಾ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬಂಧ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 295ಎ, 505ಬಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ. ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದುಕೊಂಡು ಹೋಗುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *