Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುಗ..ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ : ಹಬ್ಬದ ಆರಂಭ ಅಂತ್ಯ ಕಾಲದ ಮಾಹಿತಿ ಇಲ್ಲಿದೆ..!

Facebook
Twitter
Telegram
WhatsApp

ಯುಗ ಮತ್ತು ಆದಿ ಎಂಬ ಎರಡು ಪದಗಳು ಸೇರಿ ಹುಟ್ಟಿಕೊಂಡಿರುವ ಪದವೇ ಯುಗಾದಿ. ಈ ಹಬ್ಬವನ್ನು ಕೆಲವೆಡೆ ಉಗಾದಿ ಎಂದು ಕರೆಯುತ್ತಾರೆ. ಯುಗಾದಿಯೂ ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ. ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್ ಗಳಲ್ಲಿ ಈ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ.

ಹಿಂದೂಗಳ ಲೆಕ್ಕಾಚಾರದಲ್ಲಿ ಯುಗಾದಿಯನ್ನೇ ಹೊಸ ವರ್ಷವೆಂದು ತಿಳಿಯಲಾಗುತ್ತದೆ. ಈ ಹೊಸ ವರ್ಷವನ್ನು ಬಡವ – ಬಲ್ಲಿದರೆಂಬ ತಾರತಮ್ಯವಿಲ್ಲದೆ ಆಚರಣೆ ಮಾಡುತ್ತಾರೆ. ಬೇವು‌- ಬೆಲ್ಲ ನೀಡಿ ಜೀವನದಲ್ಲಿ ಸಿಹಿ ಕಹಿ ಸಮಾನವಾಗಿರಲಿ ಎಂದು ಹಾರೈಸುತ್ತಾರೆ. ರೈತರು ಎತ್ತುಗಳನ್ನು ಶೃಂಗರಿಸಿ, ಮೆರವಣಿಗೆ ಮಾಡುತ್ತಾರೆ.

ಹಿಂದೂ ಪುರಾಣಗಳು ಮತ್ತು ದಂತಕಥೆಗಳ ಪ್ರಕಾರ, ಭಗವಾನ್ ಬ್ರಹ್ಮನು ಈ ದಿನದಂದು ವಿಶ್ವವನ್ನು ಸೃಷ್ಟಿಸಿದನು ಎಂದು ನಂಬುಲಾಗುತ್ತದೆ. ಬ್ರಹ್ಮಾಂಡ ವಿಕಾಸದ ಸಮಯದಲ್ಲಿ, ಸೃಷ್ಟಿಕರ್ತ ಬ್ರಹ್ಮ ಈ ದಿನದಂದು ಸೃಷ್ಟಿ ಕಾರ್ಯವನ್ನು ಪ್ರಾರಂಭಿಸಿದನು. ಇನ್ನೂ ಹಿಂದೂಗಳ ನಂಬಿಕೆಯ ಪ್ರಕಾರ, ಬ್ರಹ್ಮ ದೇವರು ಇಡೀ ವಿಶ್ವವನ್ನು ಸೃಷ್ಟಿಸಿದನು ಮತ್ತು ಭೂಮಿಯ ಮೇಲಿನ ನಮ್ಮ ಒಂದು ವರ್ಷವು ಬ್ರಹ್ಮ ದೇವರಿಗೆ ಒಂದು ದಿನಕ್ಕೆ ಸಮಾನವಾಗಿರುತ್ತದೆ. ಆದ್ದರಿಂದ, ನಾವು ಹೊಸ ವರ್ಷದ ಶುಭ ವರ್ಷವನ್ನು ಪ್ರಾರಂಭಿಸಿದಾಗ ಬ್ರಹ್ಮ ದೇವರು ಹೊಸ ದಿನವನ್ನು ಪ್ರಾರಂಭಿಸುತ್ತಾನೆ. ಇಂದಿಗೂ ಆಂಧ್ರಪ್ರದೇಶದಂತಹ ರಾಜ್ಯದಲ್ಲಿ ಯುಗಾದಿಯಂದು ಬ್ರಹ್ಮ ದೇವನನ್ನು ಪೂಜಿಸುತ್ತಾರೆ

ಈ ವರ್ಷ ಯುಗಾದಿ ಹಬ್ಬವೂ ಮಂಗಳವಾರ ರಾತ್ರಿ 10.50ಕ್ಕೆ ಆರಂಭವಾಗಿ, ಬುಧವಾರ ರಾತ್ರಿ 8.20ಕ್ಕೆ ಕೊನೆಗೊಳ್ಳಲಿದೆ. ವಸಂತಕಾಲದ ಮೊದಲ ಮಳೆ ನಂತರ ಹೊಸತನವನ್ನು ಮೈಗೂಡಿಸಿಕೊಳ್ಳುವ ಮೂಲಕ ಯುಗಾದಿಯ‌ನ್ನು ಬರಮಾಡಿಕೊಳ್ಳುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!