Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾ.26 ರಂದು ಗುಬ್ಬಚ್ಚಿ ದಿನಾಚರಣೆ : ಪಕ್ಷಿಗಳಿಗಾಗಿ ಉಚಿತ ಮಣ್ಣಿನ ತಟ್ಟೆ ವಿವರಣಾ ಕಾರ್ಯಕ್ರಮ

Facebook
Twitter
Telegram
WhatsApp

 

ಚಿತ್ರದುರ್ಗ, (ಮಾ.23) : ಬಿರು ಬೇಸಿಗೆಯಲ್ಲಿ ಗುಟುಕು ನೀರು ದೊರೆಯದೇ, ಪರಿತಪಿಸಿ, ದಾಹದಿಂದ ಎಷ್ಟೋ ಪಕ್ಷಿಗಳು ಸಾವನ್ನಪ್ಪುತ್ತವೆ.  ಈ ಸುಡುವ ಬಿಸಿಲಿನಲ್ಲಿ ಪಕ್ಷಿಗಳ ದಾಹ ನೀಗಿಸಲು ಪ್ರತಿಯೊಬ್ಬರು ತಮ್ಮ ತಮ್ಮ ಮನೆಯ ಮುಂದೆ, ಬಾಲ್ಕನಿಯಲ್ಲಿ ಅಥವಾ ಮನೆಯ ಕಾಂಪೌಂಡ್ ಮೇಲೆ ಒಂದು ಮಣ್ಣಿನ ಪಾತ್ರೆ ಅಥವಾ ತಟ್ಟೆಯಲ್ಲಿ ನೀರನ್ನು ಇಟ್ಟು, ಅಸಹಾಯಕ ಪಕ್ಷಿಗಳಿಗೆ ನೀರುಣಿಸಿದರೆ ಹಲವಾರು ಪಕ್ಷಿಗಳ ಜೀವ ಉಳಿಸಿದ ಪುಣ್ಯ ಲಭಿಸುತ್ತದೆ.

ಇದೇ ನಿಟ್ಟಿನಲ್ಲಿ, ಸಮಾಜದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಗುಬ್ಬಚ್ಚಿ ಬರ್ಡ್ ಟ್ರಸ್ಟ್ ಮತ್ತು ನಗರದ ಪ್ರತಿಷ್ಠಿತ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಪಕ್ಷಿಗಳಿಗಾಗಿಯೇ ಮನೆ-ಮನೆಗೂ ಮಣ್ಣಿನ ತಟ್ಟೆಯನ್ನು ಉಚಿತವಾಗಿ ನೀಡಿ, ಸಂಸ್ಥೆಯ ಲೋಕ ಕಲ್ಯಾಣ ಧ್ಯೇಯವನ್ನು ಅನುಷ್ಟಾನಗೊಳಿಸುವ ಮಹತ್ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.

ವಿಶ್ವ ಗುಬ್ಬಚ್ಚಿ ದಿನಾಚರಣೆ-2023 ಅಂಗವಾಗಿ ಗುಬ್ಬಚ್ಚಿ ಪಕ್ಷಿ ಹಬ್ಬ-2023 ಆಚರಣೆಯನ್ನು ದಿನಾಂಕ: 26-03-2023ರ ಭಾನುವಾರದಂದು ಹಮ್ಮಿಕೊಳ್ಳಲಾಗಿದ್ದು, ವಿವರವಾದ ಕರಪತ್ರವನ್ನು ಈ ಪತ್ರದೊಂದಿಗೆ ಲಗತ್ತಿಸಿದೆ.

ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗಿಗಳಾಗಿ ಹಲವಾರು ಮೂಕ ಜೀವಿಗಳನ್ನು ಕಾಪಾಡುವ ನಮ್ಮ ಪ್ರಯತ್ನವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!