Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೂಜಾ ಗಾಂಧಿ ಚುನಾವಣೆಯಲ್ಲಿ ಸೋತಾಗ ರಮ್ಯಾ ಹೇಳಿದ್ದೇನು..? ರಮೇಶ್‌ ಅರವಿಂದ್‌ ಗೆ ಪತ್ರ ಬರೆದ ನಟಿ

Facebook
Twitter
Telegram
WhatsApp

ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮ ಇಂದಿನಿಂದ ಆರಂಭವಾಗಲಿದೆ. ಅದಕ್ಕೂ ಮುನ್ನ ಈಗಾಗಲೇ ಮೊದಲ ಗೆಸ್ಟ್‌ ಯಾರು ಎಂಬುದನ್ನು ಪ್ರೋಮೋ ಮೂಲಕ ತಿಳಿಸಲಾಗಿದೆ. ನಟಿ ರಮ್ಯಾ ಸಾಧಕರ ಖುರ್ಚಿಯಲ್ಲಿ ಕೂತಿದ್ದಾರೆ. ಅವರ ಪ್ರೋಮೋ ನೋಡಿ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ.

ನಟಿ ರಮ್ಯಾ ಚಿತ್ರರಂಗ ಬಿಟ್ಟು ರಾಜಕೀಯಕ್ಕೆ ಹೋದಾಗಲೂ ಅಭಿಮಾನಿಗಳು ಕಾಯುತ್ತಿದ್ದರು. ಮತ್ತೆ ಬನ್ನಿ ಎಂದು ಹೇಳಿದ್ದರು. ಈಗ ಮತ್ತೆ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್‌ ಆಗಿದ್ದಾರೆ. ರಮ್ಯಾ ಅವರಿಗೆ ಅಷ್ಟೇ ಪ್ರೀತಿ ಸಿಗುತ್ತಾ ಇದೆ. ಇದೀಗ ವೀಕೆಂಡ್‌ ವಿತ್‌ ರಮೇಶ್‌ ಪ್ರೋಮೋ ನೋಡಿ ಮಳೆ ಹುಡುಗಿ ಪೂಜಾಗಾಂಧಿ ಪತ್ರ ಬರೆದಿದ್ದಾರೆ.

“ರಮೇಶ್‌ ಸರ್‌, ನಿಮ್ಮ ಮತ್ತು ರಮ್ಯಾ ಮಧ್ಯೆ ನಡೆಯುವ ಮಾತಿನ ಜುಗಲ್‌ ಬಂದಿ ನೋಡುವುದಕ್ಕೆ ಲಕ್ಷಾಂತರ ಕನ್ನಡಿಗರ ರೀತಿ ನಾನು ಕೂಡ ಕಾತುರದಿಂದ ಕಾಯುತ್ತಾ ಇದ್ದೀನಿ. ರಮ್ಯಾ ಅವರು ಅದ್ಭುತವಾದ ವ್ಯಕ್ತಿ. ಆಕೆ ಸಖತ್‌ ಬೋಲ್ಡ್.

ಮನಸ್ಸಿಗೆ ಅನ್ನಿಸಿದ್ದನ್ನು ನೇರವಾಗಿ ಹೇಳುತ್ತಾರೆ. ನುಣುಚಿಕೊಳ್ಳುವ ಸ್ವಭಾವ ಅವರದ್ದಲ್ಲ. ನಂಗೆ ವೈಯಕ್ತಿಕವಾಗಿ ಆಕೆ ಯಾಕೆ ಇಷ್ಟ ಆಗುತ್ತಾರೆ ಅಂದರ ಚಿತ್ರರಂಗದ ಇತರ ನಟಿಯರ ಬಗ್ಗೆಯೂ ಅವರು ನಿಲುವು ತೆಗೆದುಕೊಳ್ಳುವ ಗುಣ ಅವರಲ್ಲಿದೆ. ಆಕೆಯಲ್ಲಿನ ಆ ಗುಣ ನನಗೆ ತುಂಬಾ ಇಷ್ಟ ಆಗುತ್ತದೆ.

ನಾನು ರಾಯಚೂರಿನ ಚುನಾವಣೆಯಲ್ಲಿ ಕೆಟ್ಟದಾಗಿ ಸೋತಾಗ, ಆಕೆ ಪೂಜಾ ಗಾಂಧಿ ಒಳ್ಳೆಯ ಪ್ರಯತ್ನ ಎಂದು ಹೇಳಿದ್ದರು. ಆ ಮಾತು ನನಗೆ ಈಗಲೂ ಚೆನ್ನಾಗಿ ನೆನಪಿದೆ. ರಮ್ಯಾ ನಿಮ್ಮ ಪ್ರೊಡಕ್ಷನ್‌ ಕಂಪನಿಗೆ ಶುಭವಾಗಲಿ. ನಿಮ್ಮ ಸಂಸ್ಥೆಯಿಂದ ರಾಷ್ಟ್ರಮಟ್ಟದ ಕನ್ನಡ ಸಿನಿಮಾಗಳು ಮೂಡಿಬರಲಿ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!