Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳ ಮೀಸಲಾತಿಗೆ ರೊಚ್ಚಿಗೆದ್ದು ಬಂಜಾರ ಸಮುದಾಯ ಪ್ರತಿಭಟನೆ ನಡೆಸುತ್ತಿರುವುದು ಯಾಕೆ ಗೊತ್ತಾ..?

---Advertisement---

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಎಸ್ಸಿ/ಎಸ್ಟಿ ಸಮುದಾಯದ ಒಳ ಮೀಸಲಾತಿಯನ್ನು ಜಾರಿಗೆ ತರುವ ವಿಚಾರವಾಗಿ ಇತ್ತಿಚೆಗಷ್ಟೇ ಮಾತನಾಡಿದ್ದರು. 101 ಜಾತಿಗಳಿಗೆ ಒಳ ಮೀಸಲಾತಿ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿದ್ದೇವೆ ಎಂದು ತಿಳಿಸಿದ್ದರು. ಈ ವಿಚಾರ ಬಂದ ಬಳಿಕ ಬಂಜಾರ ಸಮುದಾಯ ರೊಚ್ಚಿಗೆದ್ದಿದೆ. ಶಿಕಾರಿಪುರದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಸುವಷ್ಟು ದಂಗೆ ಎದ್ದಿದ್ದಾರೆ. ಅದಕ್ಕೆಲ್ಲಾ ಕಾರಣ ಏನು ಎಂಬುದು ಇಲ್ಲಿದೆ ನೋಡಿ.

ಸದ್ಯ ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಶೇ.15ರಷ್ಟು ಮೀಸಲಾತಿ ಇದೆ. ಇದನ್ನು 15ರಿಂದ 17ಕ್ಕೆ ಏರಿಕೆ ಮಾಡಿ, ನಾಲ್ಕು ಗುಂಪುಗಳಿಗೆ ಜನಸಂಖ್ಯೆಯ ಆಧಾರದ ಮೇಲೆ ಹಂಚಿಕೆ ಮಾಡಲು ಸಂಪುಟ ತೀರ್ಮಾನ ಮಾಡಿದೆ. ಉಪಸಮಿತಿ ಇದನ್ನು ಶಿಫಾರಸ್ಸು ಮಾಡಿತ್ತು. ಪರಿಶಿಷ್ಟ ಜಾತಿಯ ಮೊದಲ ಗುಂಪು ಅಂದ್ರೆ ಎಡಗೈ ಸಮುದಾಯಕ್ಕೆ ಶೇ.6 ರಷ್ಟು ಮೀಸಲಾತಿ, ಬಲಗೈ ಹಾಗೂ ಉಳಿದ ಸಮುದಾಯಗಳು ಎರಡನೇ ಗುಂಪಿಗೆ ಸೇರ್ಪಡೆಯಾಗುತ್ತವೆ. ಅವಕ್ಕೆ ಶೇ. 5.5 ಮೀಸಲಾತಿ. ಮೂರನೇ ಗುಂಪು ಬಂಜಾರ, ಭೋವಿ, ಕೊರಮ, ಕೊರಚ ಸಮುದಾಯಕ್ಕೆ 4.5 ಮೀಸಲಾತಿಯನ್ನು ನೀಡಲು ತೀರ್ಮಾನಿಸಲಾಗಿದೆ.

ಈಗ ಬಂಜಾರ ಸಮುದಾಗ ಇಷ್ಟೊಂದು ದಂಗೆ ಏಳಲು ಕಾರಣವೇ ಇದು. ಯಾಕಂದ್ರೆ ಈ ಮೊದಲು ಪರಿಶಿಷ್ಟ ಜಾತಿಗೆ ಸಿಗುತ್ತಾ ಇದ್ದಂತ ಶೇಕಡ 15 ರಷ್ಟು ಮೀಸಲಾತಿಯಲ್ಲಿ ಬಂಜಾರ ಸಮುದಾಯ ಬಹುಪಾಲು ಮೀಸಲಾತಿಯನ್ನು ಪಡೆಯುತ್ತಿದ್ದರು. ಈಗ ಶೇಕಡ 4.5 ರಷ್ಟು ಮೀಸಲಾತಿಯಲ್ಲಿಯೇ ನಾಲ್ಕು ಜಾತಿಗಳು ಹಂಚಿಕೆ ಮಾಡಿಕೊಳ್ಳಬೇಕಾಗಿದೆ. ಇದರಿಂದ ಆಕ್ರೋಶಗೊಂಡು ಬಂಜಾರ ಸಮುದಾಯ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...