Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ವಿಧಾನಸಭಾ ಚುನಾವಣೆ :  ಕೆಲವೇ ಕ್ಷಣಗಳಲ್ಲಿ ಡೇಟ್ ಅನೌನ್ಸ್ : ಸಿಎಂ ಸರ್ಕಾರಿ ಕಾರ್ಯಕ್ರಮಗಳು ಕ್ಯಾನ್ಸಲ್..!

---Advertisement---

 

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಯಾವತ್ತು ಅನೌನ್ಸ್ ಆಗಬಹುದು ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಇಂದು 11.30ಕ್ಕೆ ನವದೆಹಲಿಯಲ್ಲಿ ಚುನಾವಣಾ ಆಯುಕ್ತರಾದಂತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಟಿ ನಡೆಸುತ್ತಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಬಗ್ಗೆ ಇಂದು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಲಿದ್ದಾರೆ.

ಎಲ್ಲಾ ರೀತಿಯ ಸಿದ್ಧತೆಗಳ ಬಗ್ಗೆ ಮಾತನಾಡಿದ ಬಳಿಕ, ನಾಮ ಪತ್ರ ಸಲ್ಲಿಕೆ ಆರಂಭ ಯಾವಾಗ..? ನಾಮಪತ್ರಕ್ಕೆ ಕೊನೆ ದಿನಾಂಕ ಈ ಎಲ್ಲಾ ಮಾಹಿತಿಯನ್ನು ನೀಡಲಾಗುತ್ತದೆ. ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಕೂಡ ಇಂದಿನಿಂದಾನೇ ಆರಂಭವಾಗಲಿದೆ.

ಹೀಗಾಗಿ ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮ ರದ್ದು ಮಾಡಲಾಗಿದೆ. ಬರೀ ಬಿಜೆಪಿಗೆ ಮಾತ್ರವಲ್ಲ ಕಾಂಗ್ರೆಸ್, ಜೆಡಿಎಸ್ ಗೂ ನೀತಿ ಸಂಹಿತೆ ಬಿಸಿ ತಟ್ಟಲಿದೆ. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಉದ್ಘಾಟನಾ ಕಾರ್ಯಕ್ರಮ ಇಟ್ಟುಕೊಂಡಿದ್ದರು. ಅದಕ್ಕೂ ನೀತಿ ಸಂಹಿತೆ ಬಿಸಿ ತಟ್ಟುವ ಸಾಧ್ಯತೆ ಇದೆ.

ನೀತಿ ಸಂಹಿತೆ ಘೋಷಣೆಯಾದ ತಕ್ಷಣದಿಂದ ಸರ್ಕಾರಿ ವಾಹನ ಬಳಸುವಂತಿಲ್ಲ. ಸರ್ಕಾರ ಹೊಸ ಯೋಜನೆ ಘೋಷಿಸುವಂತಿಲ್ಲ. ಸಚಿವರು, ಶಾಸಕರು ಯೋಜನೆಗಳನ್ನು ಘೋಷಣೆ ಮಾಡುವಂತಿಲ್ಲ. ಮೇ ಮೊದಲ ವಾರದಲ್ಲಿಯೇ ಚುನಾವಣೆ ನಡೆಯುವ ಸಾಧ್ಯತೆ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...