Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಯಕನಹಟ್ಟಿ ಪಟ್ಟಣ ಪಂಚಾಯಿತಿ: ಆಸ್ತಿ ತೆರಿಗೆ ಪರಿಷ್ಕರಣೆ…!

Facebook
Twitter
Telegram
WhatsApp

 

 

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮಾರ್ಚ್.30) : ಪೌರಾಡಳಿತ ನಿರ್ದೇಶನಾಲಯ ಆದೇಶದಂತೆ ಕರ್ನಾಟಕ ಸ್ಟಾಂಪ್‍ಗಳ ಅಧಿನಿಯಮ 1957ರ 45 ಬಿ ಪ್ರಕರಣದಡಿಯಲ್ಲಿ ಪ್ರಕಟಿಸಲಾಗುವ ಚಾಲ್ತಿ ಸಾಲಿನ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ಬೆಲೆಗಳ ಆಧಾರದ ಮೇರೆಗೆ ಆಸ್ತಿ ತೆರಿಗೆ ಪರಿಷ್ಕರಣೆ ಮಾಡಬೇಕಾಗಿರುತ್ತದೆ.

2023-24ನೇ ಆರ್ಥಿಕ ಸಾಲಿನಲ್ಲಿ ಮಾರುಕಟ್ಟೆ ದರ ಸೂಚಿಗಳು ಪರಿಷ್ಕರಣೆ ಆಗದಿದ್ದಲ್ಲಿ ಶೇ.3 ರಿಂದ ಶೇ.5ರಷ್ಟು ಆಸ್ತಿ ತೆರಿಗೆ ದರ ಪರಿಷ್ಕರಣೆ ಮಾಡುವ ಹಾಗೂ ಸ್ಥಳೀಯ ಸಂಸ್ಥೆಗಳು ನೀರಿನ ದರವನ್ನು ಪ್ರತಿ ಮೂರು ವರ್ಷಗಳಿಗೊಮ್ಮೆ ಒಂದು ಬಾರಿ ನೀರಿನ ದರ ಪರಿಷ್ಕರಣೆ ಮಾಡುವ ಬಗ್ಗೆ 2023ರ ಮಾರ್ಚ್ 20ರಂದು ನಡೆದ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿಗಳ ಸಭೆಯಲ್ಲಿ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ಬೆಲೆಗಳನ್ನು 2023-24ನೇ ಸಾಲಿಗೆ ಪರಿಷ್ಕರಣೆಯಾಗದಿರುವ ಕಾರಣ 2018-19ನೇ ಸಾಲಿನ ಮಾರುಕಟ್ಟೆ ಮಾರ್ಗಸೂಚಿ ಬೆಲೆಯನ್ನು ಚಾಲ್ತಿ ಸಾಲಿನ ಮಾರ್ಗಸೂಚಿ ಬಲೆ ಎಂದು ಉಪನೊಂದಣಾಧಿಕಾರಿಗಳು ದೃಢೀಕರಿಸಿರುವುದನ್ನು ಪರಿಗಣಿಸಲಾಗಿರುತ್ತದೆ.

2018-19 ನೇ ಸಾಲಿನ ಮಾರ್ಗಸೂಚಿ ಬೆಲೆ ಆಧಾರದಲ್ಲಿ  ನಿವೇಶನಗಳ ಮಾರ್ಗಸೂಚಿ ಬೆಲೆಗಳು ಕಟ್ಟಡ ನಿರ್ಮಾಣದ ಮಾರುಕಟ್ಟೆ  ಮಾರ್ಗಸೂಚಿ ಬೆಲೆಗಳಿಗೆ 2023-24 ನೇ ಅವಧಿಗೆ ಶೇ. 3 ರಿಂದ ಶೇ.5ರ ಮಿತಿಯಲ್ಲಿ, ನಿವೇಶನ ಶೇ.3, ವಸತಿ ಶೇ.3, ವಾಣಿಜ್ಯ ಶೇ.4, ವಾಣಿಜ್ಯೇತರ ಶೇ.3 ಹಾಗೂ ಕೈಗಾರಿಕೆ ಶೇ.3.5 ದರಗಳನ್ನು ನಿಗಧಿಪಡಿಸಲು ಹಾಗೂ  ಸರ್ಕಾರದ  ಆದೇಶದನ್ವಯ ನೀರಿನ ದರವನ್ನು ಪ್ರತಿ 3 ವರ್ಷಗಳಿಗೊಮ್ಮೆ ಒಂದು ಬಾರಿ ಪರಿಷ್ಕರಣೆಯಂತೆ 2020-21ನೇ ಸಾಲಿನಲ್ಲಿ ನಿಗಧಿಪಡಿಸಿದ ನೀರಿನ ತೆರಿಗೆಯ ದರದ ಮೇಲೆ ವಸತಿ ವಾಣಿಜ್ಯ ಕೈಗಾರಿಕೆಗಳ ನೀರಿನ ತೆರಿಗೆ ಮೇಲೆ ಶೇ.3 ರಷ್ಟು ನಿಗಧಿಪಡಿಸಲು ಸಭೆಯಲ್ಲಿ ತೀರ್ಮಾನಿಸಿದಂತೆ 2023ರ ಏಪ್ರಿಲ್ 1 ರಿಂದ ಜಾರಿಗೆ ತರಲಾಗುವುದು ಎಂದು ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎನ್. ಭಾಗ್ಯಮ್ಮ ತಿಳಿಸಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!